Homeಕರ್ನಾಟಕಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

"ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ" ಎಂದು ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಪೊಲೀಸರು ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಕೆಟ್ಟು ಹೋಗಿದ್ದಾರೆ. ಲಂಚ ಪಡೆದು ನಾಯಿಯ ಹಾಗೆ ಬಿದ್ದಿರುತ್ತಾರೆ ಎಂದು ಪಕ್ಷದ ಕಾರ್ಯಕರ್ತರ ಎದುರು ಪೋನ್‌ನಲ್ಲಿ ಮಾತನಾಡುತ್ತ ಗೃಹ ಸಚಿವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ. ಇದು ಪೊಲೀಸರ ಮೇಲಿನ ಸಾರ್ವಜನಿಕ ಗೌರವವನ್ನು ಕಡಿಮೆ ಮಾಡುತ್ತದೆ ಮತ್ತು ಪೊಲೀಸರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸುತ್ತದೆ. ಹಾಗಾಗಿ ಗೃಹ ಸಚಿವರ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಎಲ್.ಹನುಮೇಗೌಡ ಎಂಬುವವರು ಗೃಹ ಸಚಿವರ ವಿರುದ್ಧ ರಾಜ್ಯಪಾಲರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದರೂ ಅವರ ವಿರುದ್ದ ಗೌರವಕ್ಕೆ ಚ್ಯುತಿ ತರುವ ರೀತಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಸುಗಳ ಕಳ್ಳ ಸಾಗಣಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಗೃಹ ಸಚಿವರು ಕೆಂಡಮಂಡಲವಾಗಿದ್ದರು. “ಇಡಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಕೆಟ್ಟು ಹೋಗಿದ್ದಾರೆ. ನಾವು ಕೈತುಂಬಾ ಸಂಬಳ ನೀಡುತ್ತೇವೆ. ಅದರಲ್ಲಿ ಬದುಕಲಾಗದೆ ಎಂಜಲು ಕಾಸು ತಿನ್ನುತ್ತಿದ್ದಾರೆ. ಯೋಗ್ಯತೆಯಿಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಿ ಸಾಯ್ರಿ. ಗೋಸಾಗಣಿಕೆದಾರರಿಂದ ಲಂಚ ಪಡೆದು ನಾಯಿಗಳ ಥರ ನಿದ್ರಿಸುತ್ತೀರಿ. ಅವರು ಯಾವುದೇ ಭಯವಿಲ್ಲದೆ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಇದಕ್ಕೆ ಪ್ರತಿಯಾಗಿ ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಸಹ “ಹಣ ಪಡೆಯದೆ ಯಾವ ಗೃಹ ಸಚಿವರು ವರ್ಗಾವಣೆ ಮಾಡಿದ್ದಾರೆ. ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ” ಎಂದು ತಿರುಗೇಟು ನೀಡಿದ್ದರು.

ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಚಿಕ್ಕಪೇಟೆ, ದೇವನಹಳ್ಳಿ, ವೈಟ್‌ಫೀಲ್ಡ್, ವರ್ತೂರು ಠಾಣೆಗೆ ವರ್ಗವಾಗಲು 50 ಲಕ್ಷ ರೂ ಕೊಡಬೇಕು. ಕೆಲವು ಜಾಗಗಳನ್ನು ಹೊರತುಪಡಿಸಿ ಉಳಿದ ಠಾಣೆಗಳಿಗೆ ವರ್ಗವಾಗಲು 25 ಲಕ್ಷ ರೂ ಎಂಜಲು ಕೊಡಬೇಕು. ವರ್ಗಾವಣೆಯ ಪ್ರತಿ ಹಂತದಲ್ಲಿಯೂ ಲಂಚ ಕೊಡುವುದು ಸಾಮಾನ್ಯವಾಗಿದೆ. ಇದು ಗೃಹ ಸಚಿವರಿಗೆ ತಿಳಿದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಸಕರು, ಇಲ್ಲದಿದ್ದರೆ ಸಚಿವರು ಇಲ್ಲದಿದ್ದರೆ ಕೇಂದ್ರ ಕಚೇರಿಗೆ ಲಂಚ ಕೊಡಬೇಕು. ಹಣವಿಲ್ಲದ ವರ್ಗಾವಣೆ ಎಂದರೆ ಅದು ಶಿಕ್ಷೆಯಾಗಿರುತ್ತದೆ. ಈ ಬಗ್ಗೆ ಗೃಹ ಸಚಿವರು ಮಾತನಾಡಲಿ ಎಂದು ಸವಾಲು ಹಾಕಿದ್ದರು.

ತನ್ನ ಹೇಳಿಕೆ ವಿವಾದಾತ್ಮಕ ರೂಪ ಪಡೆದುಕೊಳ್ಳುತ್ತಲೇ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಜಿಲ್ಲೆಯಲ್ಲಿ ಇಬ್ಬರು ಗೋ ರಕ್ಷಕ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಣಿಕೆದಾರರನ್ನು ಹಿಂಬಾಲಿಸುವಾಗ ಹಲ್ಲೆಗೊಳಗಾಗಿದ್ದಾರೆ. ಟ್ರಕ್ ಡ್ರೈವರ್ ಅವರ ಮೇಲೆ ವಾಹನ ಹರಿಸಿ ಕೊಲ್ಲಲು ಯತ್ನಿಸಿದ್ದಾನೆ, ಅವರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಹೇಳಿಕೆ ನೀಡಿದೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂಥಹ ರಾಜಕಾರಿಣಿಗಳು ಮೊದಲು‌ ಅಧಿಕಾರಿಗಳಿಂದ ಎಂಜಲು‌ ಕಾಸು ತಿಂದು‌ ಹಂದಿ ತರಹ ಮಲಗೋದನ್ನ ಬಿಡಿ….ಪ್ರತಿಯೊಂದು ಕೆಲಸಕ್ಕೂ ರಾಜಕಾರಿಣಿಗಳು ರೊಕ್ಕಾ ಕೇಳ್ತೊಇರಲ್ಲಾ. ನಾಚಿಕ್ವ್ಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...