Homeಕರ್ನಾಟಕಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

"ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ" ಎಂದು ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಪೊಲೀಸರು ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಕೆಟ್ಟು ಹೋಗಿದ್ದಾರೆ. ಲಂಚ ಪಡೆದು ನಾಯಿಯ ಹಾಗೆ ಬಿದ್ದಿರುತ್ತಾರೆ ಎಂದು ಪಕ್ಷದ ಕಾರ್ಯಕರ್ತರ ಎದುರು ಪೋನ್‌ನಲ್ಲಿ ಮಾತನಾಡುತ್ತ ಗೃಹ ಸಚಿವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ. ಇದು ಪೊಲೀಸರ ಮೇಲಿನ ಸಾರ್ವಜನಿಕ ಗೌರವವನ್ನು ಕಡಿಮೆ ಮಾಡುತ್ತದೆ ಮತ್ತು ಪೊಲೀಸರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸುತ್ತದೆ. ಹಾಗಾಗಿ ಗೃಹ ಸಚಿವರ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಎಲ್.ಹನುಮೇಗೌಡ ಎಂಬುವವರು ಗೃಹ ಸಚಿವರ ವಿರುದ್ಧ ರಾಜ್ಯಪಾಲರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದರೂ ಅವರ ವಿರುದ್ದ ಗೌರವಕ್ಕೆ ಚ್ಯುತಿ ತರುವ ರೀತಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಸುಗಳ ಕಳ್ಳ ಸಾಗಣಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಗೃಹ ಸಚಿವರು ಕೆಂಡಮಂಡಲವಾಗಿದ್ದರು. “ಇಡಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಕೆಟ್ಟು ಹೋಗಿದ್ದಾರೆ. ನಾವು ಕೈತುಂಬಾ ಸಂಬಳ ನೀಡುತ್ತೇವೆ. ಅದರಲ್ಲಿ ಬದುಕಲಾಗದೆ ಎಂಜಲು ಕಾಸು ತಿನ್ನುತ್ತಿದ್ದಾರೆ. ಯೋಗ್ಯತೆಯಿಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಿ ಸಾಯ್ರಿ. ಗೋಸಾಗಣಿಕೆದಾರರಿಂದ ಲಂಚ ಪಡೆದು ನಾಯಿಗಳ ಥರ ನಿದ್ರಿಸುತ್ತೀರಿ. ಅವರು ಯಾವುದೇ ಭಯವಿಲ್ಲದೆ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಇದಕ್ಕೆ ಪ್ರತಿಯಾಗಿ ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಸಹ “ಹಣ ಪಡೆಯದೆ ಯಾವ ಗೃಹ ಸಚಿವರು ವರ್ಗಾವಣೆ ಮಾಡಿದ್ದಾರೆ. ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ” ಎಂದು ತಿರುಗೇಟು ನೀಡಿದ್ದರು.

ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಚಿಕ್ಕಪೇಟೆ, ದೇವನಹಳ್ಳಿ, ವೈಟ್‌ಫೀಲ್ಡ್, ವರ್ತೂರು ಠಾಣೆಗೆ ವರ್ಗವಾಗಲು 50 ಲಕ್ಷ ರೂ ಕೊಡಬೇಕು. ಕೆಲವು ಜಾಗಗಳನ್ನು ಹೊರತುಪಡಿಸಿ ಉಳಿದ ಠಾಣೆಗಳಿಗೆ ವರ್ಗವಾಗಲು 25 ಲಕ್ಷ ರೂ ಎಂಜಲು ಕೊಡಬೇಕು. ವರ್ಗಾವಣೆಯ ಪ್ರತಿ ಹಂತದಲ್ಲಿಯೂ ಲಂಚ ಕೊಡುವುದು ಸಾಮಾನ್ಯವಾಗಿದೆ. ಇದು ಗೃಹ ಸಚಿವರಿಗೆ ತಿಳಿದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಸಕರು, ಇಲ್ಲದಿದ್ದರೆ ಸಚಿವರು ಇಲ್ಲದಿದ್ದರೆ ಕೇಂದ್ರ ಕಚೇರಿಗೆ ಲಂಚ ಕೊಡಬೇಕು. ಹಣವಿಲ್ಲದ ವರ್ಗಾವಣೆ ಎಂದರೆ ಅದು ಶಿಕ್ಷೆಯಾಗಿರುತ್ತದೆ. ಈ ಬಗ್ಗೆ ಗೃಹ ಸಚಿವರು ಮಾತನಾಡಲಿ ಎಂದು ಸವಾಲು ಹಾಕಿದ್ದರು.

ತನ್ನ ಹೇಳಿಕೆ ವಿವಾದಾತ್ಮಕ ರೂಪ ಪಡೆದುಕೊಳ್ಳುತ್ತಲೇ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಜಿಲ್ಲೆಯಲ್ಲಿ ಇಬ್ಬರು ಗೋ ರಕ್ಷಕ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಣಿಕೆದಾರರನ್ನು ಹಿಂಬಾಲಿಸುವಾಗ ಹಲ್ಲೆಗೊಳಗಾಗಿದ್ದಾರೆ. ಟ್ರಕ್ ಡ್ರೈವರ್ ಅವರ ಮೇಲೆ ವಾಹನ ಹರಿಸಿ ಕೊಲ್ಲಲು ಯತ್ನಿಸಿದ್ದಾನೆ, ಅವರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಹೇಳಿಕೆ ನೀಡಿದೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂಥಹ ರಾಜಕಾರಿಣಿಗಳು ಮೊದಲು‌ ಅಧಿಕಾರಿಗಳಿಂದ ಎಂಜಲು‌ ಕಾಸು ತಿಂದು‌ ಹಂದಿ ತರಹ ಮಲಗೋದನ್ನ ಬಿಡಿ….ಪ್ರತಿಯೊಂದು ಕೆಲಸಕ್ಕೂ ರಾಜಕಾರಿಣಿಗಳು ರೊಕ್ಕಾ ಕೇಳ್ತೊಇರಲ್ಲಾ. ನಾಚಿಕ್ವ್ಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...