Homeಕರ್ನಾಟಕಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

"ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ" ಎಂದು ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಪೊಲೀಸರು ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಕೆಟ್ಟು ಹೋಗಿದ್ದಾರೆ. ಲಂಚ ಪಡೆದು ನಾಯಿಯ ಹಾಗೆ ಬಿದ್ದಿರುತ್ತಾರೆ ಎಂದು ಪಕ್ಷದ ಕಾರ್ಯಕರ್ತರ ಎದುರು ಪೋನ್‌ನಲ್ಲಿ ಮಾತನಾಡುತ್ತ ಗೃಹ ಸಚಿವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ. ಇದು ಪೊಲೀಸರ ಮೇಲಿನ ಸಾರ್ವಜನಿಕ ಗೌರವವನ್ನು ಕಡಿಮೆ ಮಾಡುತ್ತದೆ ಮತ್ತು ಪೊಲೀಸರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸುತ್ತದೆ. ಹಾಗಾಗಿ ಗೃಹ ಸಚಿವರ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಎಲ್.ಹನುಮೇಗೌಡ ಎಂಬುವವರು ಗೃಹ ಸಚಿವರ ವಿರುದ್ಧ ರಾಜ್ಯಪಾಲರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದರೂ ಅವರ ವಿರುದ್ದ ಗೌರವಕ್ಕೆ ಚ್ಯುತಿ ತರುವ ರೀತಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಸುಗಳ ಕಳ್ಳ ಸಾಗಣಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಗೃಹ ಸಚಿವರು ಕೆಂಡಮಂಡಲವಾಗಿದ್ದರು. “ಇಡಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಕೆಟ್ಟು ಹೋಗಿದ್ದಾರೆ. ನಾವು ಕೈತುಂಬಾ ಸಂಬಳ ನೀಡುತ್ತೇವೆ. ಅದರಲ್ಲಿ ಬದುಕಲಾಗದೆ ಎಂಜಲು ಕಾಸು ತಿನ್ನುತ್ತಿದ್ದಾರೆ. ಯೋಗ್ಯತೆಯಿಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಿ ಸಾಯ್ರಿ. ಗೋಸಾಗಣಿಕೆದಾರರಿಂದ ಲಂಚ ಪಡೆದು ನಾಯಿಗಳ ಥರ ನಿದ್ರಿಸುತ್ತೀರಿ. ಅವರು ಯಾವುದೇ ಭಯವಿಲ್ಲದೆ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಇದಕ್ಕೆ ಪ್ರತಿಯಾಗಿ ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಸಹ “ಹಣ ಪಡೆಯದೆ ಯಾವ ಗೃಹ ಸಚಿವರು ವರ್ಗಾವಣೆ ಮಾಡಿದ್ದಾರೆ. ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ” ಎಂದು ತಿರುಗೇಟು ನೀಡಿದ್ದರು.

ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಚಿಕ್ಕಪೇಟೆ, ದೇವನಹಳ್ಳಿ, ವೈಟ್‌ಫೀಲ್ಡ್, ವರ್ತೂರು ಠಾಣೆಗೆ ವರ್ಗವಾಗಲು 50 ಲಕ್ಷ ರೂ ಕೊಡಬೇಕು. ಕೆಲವು ಜಾಗಗಳನ್ನು ಹೊರತುಪಡಿಸಿ ಉಳಿದ ಠಾಣೆಗಳಿಗೆ ವರ್ಗವಾಗಲು 25 ಲಕ್ಷ ರೂ ಎಂಜಲು ಕೊಡಬೇಕು. ವರ್ಗಾವಣೆಯ ಪ್ರತಿ ಹಂತದಲ್ಲಿಯೂ ಲಂಚ ಕೊಡುವುದು ಸಾಮಾನ್ಯವಾಗಿದೆ. ಇದು ಗೃಹ ಸಚಿವರಿಗೆ ತಿಳಿದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಸಕರು, ಇಲ್ಲದಿದ್ದರೆ ಸಚಿವರು ಇಲ್ಲದಿದ್ದರೆ ಕೇಂದ್ರ ಕಚೇರಿಗೆ ಲಂಚ ಕೊಡಬೇಕು. ಹಣವಿಲ್ಲದ ವರ್ಗಾವಣೆ ಎಂದರೆ ಅದು ಶಿಕ್ಷೆಯಾಗಿರುತ್ತದೆ. ಈ ಬಗ್ಗೆ ಗೃಹ ಸಚಿವರು ಮಾತನಾಡಲಿ ಎಂದು ಸವಾಲು ಹಾಕಿದ್ದರು.

ತನ್ನ ಹೇಳಿಕೆ ವಿವಾದಾತ್ಮಕ ರೂಪ ಪಡೆದುಕೊಳ್ಳುತ್ತಲೇ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಜಿಲ್ಲೆಯಲ್ಲಿ ಇಬ್ಬರು ಗೋ ರಕ್ಷಕ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಣಿಕೆದಾರರನ್ನು ಹಿಂಬಾಲಿಸುವಾಗ ಹಲ್ಲೆಗೊಳಗಾಗಿದ್ದಾರೆ. ಟ್ರಕ್ ಡ್ರೈವರ್ ಅವರ ಮೇಲೆ ವಾಹನ ಹರಿಸಿ ಕೊಲ್ಲಲು ಯತ್ನಿಸಿದ್ದಾನೆ, ಅವರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಹೇಳಿಕೆ ನೀಡಿದೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂಥಹ ರಾಜಕಾರಿಣಿಗಳು ಮೊದಲು‌ ಅಧಿಕಾರಿಗಳಿಂದ ಎಂಜಲು‌ ಕಾಸು ತಿಂದು‌ ಹಂದಿ ತರಹ ಮಲಗೋದನ್ನ ಬಿಡಿ….ಪ್ರತಿಯೊಂದು ಕೆಲಸಕ್ಕೂ ರಾಜಕಾರಿಣಿಗಳು ರೊಕ್ಕಾ ಕೇಳ್ತೊಇರಲ್ಲಾ. ನಾಚಿಕ್ವ್ಯಾಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...