Homeಕರ್ನಾಟಕಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

"ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ" ಎಂದು ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಪೊಲೀಸರು ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಕೆಟ್ಟು ಹೋಗಿದ್ದಾರೆ. ಲಂಚ ಪಡೆದು ನಾಯಿಯ ಹಾಗೆ ಬಿದ್ದಿರುತ್ತಾರೆ ಎಂದು ಪಕ್ಷದ ಕಾರ್ಯಕರ್ತರ ಎದುರು ಪೋನ್‌ನಲ್ಲಿ ಮಾತನಾಡುತ್ತ ಗೃಹ ಸಚಿವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ. ಇದು ಪೊಲೀಸರ ಮೇಲಿನ ಸಾರ್ವಜನಿಕ ಗೌರವವನ್ನು ಕಡಿಮೆ ಮಾಡುತ್ತದೆ ಮತ್ತು ಪೊಲೀಸರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸುತ್ತದೆ. ಹಾಗಾಗಿ ಗೃಹ ಸಚಿವರ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಎಲ್.ಹನುಮೇಗೌಡ ಎಂಬುವವರು ಗೃಹ ಸಚಿವರ ವಿರುದ್ಧ ರಾಜ್ಯಪಾಲರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದರೂ ಅವರ ವಿರುದ್ದ ಗೌರವಕ್ಕೆ ಚ್ಯುತಿ ತರುವ ರೀತಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಸುಗಳ ಕಳ್ಳ ಸಾಗಣಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಗೃಹ ಸಚಿವರು ಕೆಂಡಮಂಡಲವಾಗಿದ್ದರು. “ಇಡಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಕೆಟ್ಟು ಹೋಗಿದ್ದಾರೆ. ನಾವು ಕೈತುಂಬಾ ಸಂಬಳ ನೀಡುತ್ತೇವೆ. ಅದರಲ್ಲಿ ಬದುಕಲಾಗದೆ ಎಂಜಲು ಕಾಸು ತಿನ್ನುತ್ತಿದ್ದಾರೆ. ಯೋಗ್ಯತೆಯಿಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಿ ಸಾಯ್ರಿ. ಗೋಸಾಗಣಿಕೆದಾರರಿಂದ ಲಂಚ ಪಡೆದು ನಾಯಿಗಳ ಥರ ನಿದ್ರಿಸುತ್ತೀರಿ. ಅವರು ಯಾವುದೇ ಭಯವಿಲ್ಲದೆ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಇದಕ್ಕೆ ಪ್ರತಿಯಾಗಿ ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಸಹ “ಹಣ ಪಡೆಯದೆ ಯಾವ ಗೃಹ ಸಚಿವರು ವರ್ಗಾವಣೆ ಮಾಡಿದ್ದಾರೆ. ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ” ಎಂದು ತಿರುಗೇಟು ನೀಡಿದ್ದರು.

ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಚಿಕ್ಕಪೇಟೆ, ದೇವನಹಳ್ಳಿ, ವೈಟ್‌ಫೀಲ್ಡ್, ವರ್ತೂರು ಠಾಣೆಗೆ ವರ್ಗವಾಗಲು 50 ಲಕ್ಷ ರೂ ಕೊಡಬೇಕು. ಕೆಲವು ಜಾಗಗಳನ್ನು ಹೊರತುಪಡಿಸಿ ಉಳಿದ ಠಾಣೆಗಳಿಗೆ ವರ್ಗವಾಗಲು 25 ಲಕ್ಷ ರೂ ಎಂಜಲು ಕೊಡಬೇಕು. ವರ್ಗಾವಣೆಯ ಪ್ರತಿ ಹಂತದಲ್ಲಿಯೂ ಲಂಚ ಕೊಡುವುದು ಸಾಮಾನ್ಯವಾಗಿದೆ. ಇದು ಗೃಹ ಸಚಿವರಿಗೆ ತಿಳಿದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಸಕರು, ಇಲ್ಲದಿದ್ದರೆ ಸಚಿವರು ಇಲ್ಲದಿದ್ದರೆ ಕೇಂದ್ರ ಕಚೇರಿಗೆ ಲಂಚ ಕೊಡಬೇಕು. ಹಣವಿಲ್ಲದ ವರ್ಗಾವಣೆ ಎಂದರೆ ಅದು ಶಿಕ್ಷೆಯಾಗಿರುತ್ತದೆ. ಈ ಬಗ್ಗೆ ಗೃಹ ಸಚಿವರು ಮಾತನಾಡಲಿ ಎಂದು ಸವಾಲು ಹಾಕಿದ್ದರು.

ತನ್ನ ಹೇಳಿಕೆ ವಿವಾದಾತ್ಮಕ ರೂಪ ಪಡೆದುಕೊಳ್ಳುತ್ತಲೇ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಜಿಲ್ಲೆಯಲ್ಲಿ ಇಬ್ಬರು ಗೋ ರಕ್ಷಕ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಣಿಕೆದಾರರನ್ನು ಹಿಂಬಾಲಿಸುವಾಗ ಹಲ್ಲೆಗೊಳಗಾಗಿದ್ದಾರೆ. ಟ್ರಕ್ ಡ್ರೈವರ್ ಅವರ ಮೇಲೆ ವಾಹನ ಹರಿಸಿ ಕೊಲ್ಲಲು ಯತ್ನಿಸಿದ್ದಾನೆ, ಅವರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಹೇಳಿಕೆ ನೀಡಿದೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂಥಹ ರಾಜಕಾರಿಣಿಗಳು ಮೊದಲು‌ ಅಧಿಕಾರಿಗಳಿಂದ ಎಂಜಲು‌ ಕಾಸು ತಿಂದು‌ ಹಂದಿ ತರಹ ಮಲಗೋದನ್ನ ಬಿಡಿ….ಪ್ರತಿಯೊಂದು ಕೆಲಸಕ್ಕೂ ರಾಜಕಾರಿಣಿಗಳು ರೊಕ್ಕಾ ಕೇಳ್ತೊಇರಲ್ಲಾ. ನಾಚಿಕ್ವ್ಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...