Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಭೆ ನಿರ್ಧರಿಸಿದೆ.

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ ಅಗೌರವ ತೋರಿದ ಸೆಶೆನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಯಚೂರಿನ ಘಟನೆ ಖಂಡಿಸಿ ಇಂದು ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ವಿ.ನಾಗರಾಜು, ಕರ್ನಾಟಕ ಜನಶಕ್ತಿಯ ಗೌರಿ, ಹಿರಿಯ ವಕೀಲರಾದ ಎಸ್ ಬಾಲನ್, ಹೋರಾಟಗಾರರಾದ ಸಿರಿಮನೆ ನಾಗರಾಜುರವರು ಭಾಗವಹಿಸಿದ್ದರು. “ರಾಯಚೂರಿನ ಜಡ್ಜ್‌ ಅಂಬೇಡ್ಕರ್ ಫೋಟೊ ತೆಗೆಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಅಂಬೇಡ್ಕರ್‌ರವರಿಗೆ ಅಪಚಾರ ಮಾಡಿದ್ದಾರೆ, ಆ ಮೂಲಕ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದು ದಲಿತರ ಮೇಲೆ ನಡೆದಿರುವ ದೌರ್ಜನ್ಯವಾಗಿದ್ದು, ಆ ನ್ಯಾಯಾಧೀಶರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ರಾಜ್ಯಾದ್ಯಂತ ದೂರು ದಾಖಲಿಸಲು ಕರೆ ನೀಡಲಾಗಿದೆ.

“ರಾಯಚೂರಿನಲ್ಲಿ ನಡೆದಿರುವುದು ಬಿಡಿ ಪ್ರಕರಣವಲ್ಲ. ವ್ಯವಸ್ಥಿತವಾಗಿ ಅಂಬೇಡ್ಕರ್‌ರನ್ನು ಮರೆವು ಮಾಡುವ, ಮರೆಯಿಸುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಡಿಸೆಂಬರ್ 06ರ ಅಂಬೇಡ್ಕರ್ ಪರಿನಿರ್ವಾಣದಂದು ಬೆಂಗಳೂರಿನ ವಿಧಾನಸೌಧ ಎದುರು ಇರುವ ಅಂಬೇಡ್ಕರ್ ಪ್ರತಿಮೆ ಎದುರು ಮಾಲಾರ್ಪಣೆ ಮಾಡಿ, ಅವರನ್ನು ಸ್ಮರಿಸಲಾಗುತ್ತಿತ್ತು. ಅದರೆ 2019ರಲ್ಲಿ ಯಡಿಯೂರಪ್ಪನವರು ಸಿಎಂ ಆದ ನಂತರ ಅದನ್ನು ಕಡೆಗಣಿಸಲಾಗುತ್ತಿದೆ. 2021ರ ಡಿಸೆಂಬರ್‌ 06 ರಂದು ಸಹ ಮಾಲಾರ್ಪಣೆ ಮಾಡದಿದ್ದಾಗ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಬೇಕಾಗಿತ್ತು. ಜೊತೆಗೆ ಜನವರಿ 26 ರಂದು ಸಹ ಗಣರಾಜ್ಯೋತ್ಸವದ ದಿನ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ. ಅದಕ್ಕೂ ಪ್ರತಿಭಟನೆ ನಡೆದ ನಂತರವಷ್ಟೇ ಕಾಟಾಚಾರಕ್ಕೆ ಮಾಲಾರ್ಪಣೆ ಮಾಡಲಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ಫೋಟೊ ತೆಗೆಸಿರುವುದು ಸಹ ಅದರ ಮುಂದುವರೆದ ಭಾಗವಾಗಿದ್ದು ಅಂಬೇಡ್ಕರ್‌ರವರನ್ನು ಮರೆ ಮಾಚುವ ಹುನ್ನಾರ ನಡೆಯುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹೈಕೋರ್ಟ್‌ನಲ್ಲಿ ನ್ಯಾಯಾಧೀಶರೊಬ್ಬರು “ದೇಶದ ಎಲ್ಲಾ ಕೋರ್ಟುಗಳಲ್ಲಿ ಮಹಾತ್ಮ ಗಾಂಧಿಯವರ ಫೋಟೊ ಮಾತ್ರ ಇರಬೇಕು ಎಂಬ ಸುತ್ತೋಲೆ ಹೊರಡಿಸಿದ್ದಾರೆ. ಇದು ಸರಿಯಾದುದ್ದಲ್ಲ. ದೇಶದ ಎಲ್ಲಾ ಕೋರ್ಟುಗಳಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೊ ಇಡುವಂತೆ ಒತ್ತಾಯಿಸಬೇಕಿದೆ” ಎಂಬ ಆಗ್ರಹ ಕೇಳಿಬಂತು.

ಹಿರಿಯ ವಕೀಲರಾದ ಎಸ್ ಬಾಲನ್‌ರವರು ಮಾತನಾಡಿ “ಇಡಿ ನ್ಯಾಯಾಂಗದಲ್ಲಿಯೇ ದಲಿತ ಪ್ರಾತಿನಿಧ್ಯ ತೀರಾ ಕನಿಷ್ಠ ಮಟ್ಟದಲ್ಲಿದೆ. ‘ಕರ್ನಾಟಕದಲ್ಲಿನ 45 ನ್ಯಾಯಾಧೀಶರಲ್ಲಿ 25 ಜನರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದು, 20 ಜನರು ಇತರೆ ಪ್ರಬಲ ಜಾತಿಗಳಿಗೆ ಸೇರಿದ್ದಾರೆ. ಒಬ್ಬರು ಮಾತ್ರ ದಲಿತ ಸಮುದಾಯಕ್ಕೆ ಸೇರಿದ್ದಾರೆ. ಇನ್ನು ನ್ಯಾಯಾಂಗದ ಉನ್ನತ ಅಧಿಕಾರಿ ಹುದ್ದೆಗಳಲ್ಲಿಯೂ ಸಹ ದಲಿತರಿಲ್ಲ. ಪ್ರತಿಭಾವಂತ ದಲಿತರಿದ್ದರೂ ಸಹ ಅವರಿಗೆ ಉನ್ನತ ಹುದ್ದೆಗಳನ್ನು ನೀಡುತ್ತಿಲ್ಲ. ಹಾಗಾಗಿ ನ್ಯಾಯಾಂಗದಲ್ಲಿ ಮೀಸಲಾತಿ ಜಾರಿಯಾಗಬೇಕು” ಎಂದು ಆಗ್ರಹಿಸಿದರು.

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಜ್ಜಾಗಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ದೇಶಕ್ಕೆ ಅದರ ಸಂವಿಧಾನವೇ ಮೂಲಾಧಾರವಾಗಿದೆ. ಸಂವಿಧಾನದ ಆಶಯದಂತೆ ಆ ದೇಶಗಳು ಕಾರ್ಯನಿರ್ವಹಿಸುತ್ತವೆ. ಭಾರತದ ಸಂವಿಧಾನದ ಶಿಲ್ಪಿ (Architect of Indian Constitution) ಎಂದು ಅಧಿಕೃತವಾಗಿ ಅಂಬೇಡ್ಕರ್‌ರನ್ನು ಹೆಸರಿಸಲಾಗಿದೆ. ಅಂತಹ ಸಂವಿಧಾನದ ಶಿಲ್ಪಿಯ ಫೋಟೊವನ್ನು ಕೋರ್ಟ್‌ಗಳಲ್ಲಿ ಇಡಬಾರದು ಎಂದರೆ ನಾಚಿಗೇಡಿನ ವಿಷಯ. ಹಾಗಾಗಿ ಎಲ್ಲಾ ಕೋರ್ಟುಗಳಲ್ಲಿ ಫೋಟೊ ಇಡುವಂತೆ ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ತುರ್ತು ಹಕ್ಕೊತ್ತಾಯವಾಗಿ ‘ಗಣರಾಜ್ಯೋತ್ಸವದ ದಿನ ಅಂಬೇಡ್ಕರ್ ಫೋಟೊ ಇರಬೇಕು ಎಲ್ಲಾ ಇಲಾಖೆಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದನ್ನು ಉಲ್ಲಂಘಿಸಿ ರಾಯಚೂರು ಜಿಲ್ಲಾಧಿಕಾರಿ ತಾಂತ್ರಿಕ ಕಾರಣವೊಡ್ಡಿ ಅಂಬೇಡ್ಕರ್ ಫೋಟೊ ತೆಗೆಸಿದ್ದಾರೆ. ಇದು ಗಂಭೀರ ಲೋಪವಾಗಿದ್ದು, ಅವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಕೂಡಲೇ ಹೈಕೋರ್ಟ್ ಎಲ್ಲಾ ನ್ಯಾಯಾಲಯಗಳಿಗೆ ಅಂಬೇಡ್ಕರ್ ಫೋಟೊ ಇರಬೇಕೆಂಬ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿ ಜನವರಿ 28ರ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಶುಕ್ರವಾರದ ಪ್ರತಿಭಟನೆ ನಂತರ ವಿಸ್ತೃತ ಸಭೆ ನಡೆಸಿ, ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಮತ್ತು ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ನಡೆಸಲು ಚಿಂತಿಸಲಾಯಿತು. ಸಭೆಯಲ್ಲಿ ಕಾರ್ಮಿಕ ಮುಖಂಡರಾದ ವರದರಾಜೇಂದ್ರ, ದಲಿತ ಮುಖಂಡರಾದ ಡಿ.ರಾಜಗೋಪಾಲ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ; ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...