Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಭೆ ನಿರ್ಧರಿಸಿದೆ.

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ ಅಗೌರವ ತೋರಿದ ಸೆಶೆನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಯಚೂರಿನ ಘಟನೆ ಖಂಡಿಸಿ ಇಂದು ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ವಿ.ನಾಗರಾಜು, ಕರ್ನಾಟಕ ಜನಶಕ್ತಿಯ ಗೌರಿ, ಹಿರಿಯ ವಕೀಲರಾದ ಎಸ್ ಬಾಲನ್, ಹೋರಾಟಗಾರರಾದ ಸಿರಿಮನೆ ನಾಗರಾಜುರವರು ಭಾಗವಹಿಸಿದ್ದರು. “ರಾಯಚೂರಿನ ಜಡ್ಜ್‌ ಅಂಬೇಡ್ಕರ್ ಫೋಟೊ ತೆಗೆಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಅಂಬೇಡ್ಕರ್‌ರವರಿಗೆ ಅಪಚಾರ ಮಾಡಿದ್ದಾರೆ, ಆ ಮೂಲಕ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದು ದಲಿತರ ಮೇಲೆ ನಡೆದಿರುವ ದೌರ್ಜನ್ಯವಾಗಿದ್ದು, ಆ ನ್ಯಾಯಾಧೀಶರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ರಾಜ್ಯಾದ್ಯಂತ ದೂರು ದಾಖಲಿಸಲು ಕರೆ ನೀಡಲಾಗಿದೆ.

“ರಾಯಚೂರಿನಲ್ಲಿ ನಡೆದಿರುವುದು ಬಿಡಿ ಪ್ರಕರಣವಲ್ಲ. ವ್ಯವಸ್ಥಿತವಾಗಿ ಅಂಬೇಡ್ಕರ್‌ರನ್ನು ಮರೆವು ಮಾಡುವ, ಮರೆಯಿಸುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಡಿಸೆಂಬರ್ 06ರ ಅಂಬೇಡ್ಕರ್ ಪರಿನಿರ್ವಾಣದಂದು ಬೆಂಗಳೂರಿನ ವಿಧಾನಸೌಧ ಎದುರು ಇರುವ ಅಂಬೇಡ್ಕರ್ ಪ್ರತಿಮೆ ಎದುರು ಮಾಲಾರ್ಪಣೆ ಮಾಡಿ, ಅವರನ್ನು ಸ್ಮರಿಸಲಾಗುತ್ತಿತ್ತು. ಅದರೆ 2019ರಲ್ಲಿ ಯಡಿಯೂರಪ್ಪನವರು ಸಿಎಂ ಆದ ನಂತರ ಅದನ್ನು ಕಡೆಗಣಿಸಲಾಗುತ್ತಿದೆ. 2021ರ ಡಿಸೆಂಬರ್‌ 06 ರಂದು ಸಹ ಮಾಲಾರ್ಪಣೆ ಮಾಡದಿದ್ದಾಗ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಬೇಕಾಗಿತ್ತು. ಜೊತೆಗೆ ಜನವರಿ 26 ರಂದು ಸಹ ಗಣರಾಜ್ಯೋತ್ಸವದ ದಿನ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ. ಅದಕ್ಕೂ ಪ್ರತಿಭಟನೆ ನಡೆದ ನಂತರವಷ್ಟೇ ಕಾಟಾಚಾರಕ್ಕೆ ಮಾಲಾರ್ಪಣೆ ಮಾಡಲಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ಫೋಟೊ ತೆಗೆಸಿರುವುದು ಸಹ ಅದರ ಮುಂದುವರೆದ ಭಾಗವಾಗಿದ್ದು ಅಂಬೇಡ್ಕರ್‌ರವರನ್ನು ಮರೆ ಮಾಚುವ ಹುನ್ನಾರ ನಡೆಯುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹೈಕೋರ್ಟ್‌ನಲ್ಲಿ ನ್ಯಾಯಾಧೀಶರೊಬ್ಬರು “ದೇಶದ ಎಲ್ಲಾ ಕೋರ್ಟುಗಳಲ್ಲಿ ಮಹಾತ್ಮ ಗಾಂಧಿಯವರ ಫೋಟೊ ಮಾತ್ರ ಇರಬೇಕು ಎಂಬ ಸುತ್ತೋಲೆ ಹೊರಡಿಸಿದ್ದಾರೆ. ಇದು ಸರಿಯಾದುದ್ದಲ್ಲ. ದೇಶದ ಎಲ್ಲಾ ಕೋರ್ಟುಗಳಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೊ ಇಡುವಂತೆ ಒತ್ತಾಯಿಸಬೇಕಿದೆ” ಎಂಬ ಆಗ್ರಹ ಕೇಳಿಬಂತು.

ಹಿರಿಯ ವಕೀಲರಾದ ಎಸ್ ಬಾಲನ್‌ರವರು ಮಾತನಾಡಿ “ಇಡಿ ನ್ಯಾಯಾಂಗದಲ್ಲಿಯೇ ದಲಿತ ಪ್ರಾತಿನಿಧ್ಯ ತೀರಾ ಕನಿಷ್ಠ ಮಟ್ಟದಲ್ಲಿದೆ. ‘ಕರ್ನಾಟಕದಲ್ಲಿನ 45 ನ್ಯಾಯಾಧೀಶರಲ್ಲಿ 25 ಜನರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದು, 20 ಜನರು ಇತರೆ ಪ್ರಬಲ ಜಾತಿಗಳಿಗೆ ಸೇರಿದ್ದಾರೆ. ಒಬ್ಬರು ಮಾತ್ರ ದಲಿತ ಸಮುದಾಯಕ್ಕೆ ಸೇರಿದ್ದಾರೆ. ಇನ್ನು ನ್ಯಾಯಾಂಗದ ಉನ್ನತ ಅಧಿಕಾರಿ ಹುದ್ದೆಗಳಲ್ಲಿಯೂ ಸಹ ದಲಿತರಿಲ್ಲ. ಪ್ರತಿಭಾವಂತ ದಲಿತರಿದ್ದರೂ ಸಹ ಅವರಿಗೆ ಉನ್ನತ ಹುದ್ದೆಗಳನ್ನು ನೀಡುತ್ತಿಲ್ಲ. ಹಾಗಾಗಿ ನ್ಯಾಯಾಂಗದಲ್ಲಿ ಮೀಸಲಾತಿ ಜಾರಿಯಾಗಬೇಕು” ಎಂದು ಆಗ್ರಹಿಸಿದರು.

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಜ್ಜಾಗಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ದೇಶಕ್ಕೆ ಅದರ ಸಂವಿಧಾನವೇ ಮೂಲಾಧಾರವಾಗಿದೆ. ಸಂವಿಧಾನದ ಆಶಯದಂತೆ ಆ ದೇಶಗಳು ಕಾರ್ಯನಿರ್ವಹಿಸುತ್ತವೆ. ಭಾರತದ ಸಂವಿಧಾನದ ಶಿಲ್ಪಿ (Architect of Indian Constitution) ಎಂದು ಅಧಿಕೃತವಾಗಿ ಅಂಬೇಡ್ಕರ್‌ರನ್ನು ಹೆಸರಿಸಲಾಗಿದೆ. ಅಂತಹ ಸಂವಿಧಾನದ ಶಿಲ್ಪಿಯ ಫೋಟೊವನ್ನು ಕೋರ್ಟ್‌ಗಳಲ್ಲಿ ಇಡಬಾರದು ಎಂದರೆ ನಾಚಿಗೇಡಿನ ವಿಷಯ. ಹಾಗಾಗಿ ಎಲ್ಲಾ ಕೋರ್ಟುಗಳಲ್ಲಿ ಫೋಟೊ ಇಡುವಂತೆ ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ತುರ್ತು ಹಕ್ಕೊತ್ತಾಯವಾಗಿ ‘ಗಣರಾಜ್ಯೋತ್ಸವದ ದಿನ ಅಂಬೇಡ್ಕರ್ ಫೋಟೊ ಇರಬೇಕು ಎಲ್ಲಾ ಇಲಾಖೆಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದನ್ನು ಉಲ್ಲಂಘಿಸಿ ರಾಯಚೂರು ಜಿಲ್ಲಾಧಿಕಾರಿ ತಾಂತ್ರಿಕ ಕಾರಣವೊಡ್ಡಿ ಅಂಬೇಡ್ಕರ್ ಫೋಟೊ ತೆಗೆಸಿದ್ದಾರೆ. ಇದು ಗಂಭೀರ ಲೋಪವಾಗಿದ್ದು, ಅವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಕೂಡಲೇ ಹೈಕೋರ್ಟ್ ಎಲ್ಲಾ ನ್ಯಾಯಾಲಯಗಳಿಗೆ ಅಂಬೇಡ್ಕರ್ ಫೋಟೊ ಇರಬೇಕೆಂಬ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿ ಜನವರಿ 28ರ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಶುಕ್ರವಾರದ ಪ್ರತಿಭಟನೆ ನಂತರ ವಿಸ್ತೃತ ಸಭೆ ನಡೆಸಿ, ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಮತ್ತು ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ನಡೆಸಲು ಚಿಂತಿಸಲಾಯಿತು. ಸಭೆಯಲ್ಲಿ ಕಾರ್ಮಿಕ ಮುಖಂಡರಾದ ವರದರಾಜೇಂದ್ರ, ದಲಿತ ಮುಖಂಡರಾದ ಡಿ.ರಾಜಗೋಪಾಲ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ; ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....