Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಭೆ ನಿರ್ಧರಿಸಿದೆ.

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ ಅಗೌರವ ತೋರಿದ ಸೆಶೆನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಯಚೂರಿನ ಘಟನೆ ಖಂಡಿಸಿ ಇಂದು ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ವಿ.ನಾಗರಾಜು, ಕರ್ನಾಟಕ ಜನಶಕ್ತಿಯ ಗೌರಿ, ಹಿರಿಯ ವಕೀಲರಾದ ಎಸ್ ಬಾಲನ್, ಹೋರಾಟಗಾರರಾದ ಸಿರಿಮನೆ ನಾಗರಾಜುರವರು ಭಾಗವಹಿಸಿದ್ದರು. “ರಾಯಚೂರಿನ ಜಡ್ಜ್‌ ಅಂಬೇಡ್ಕರ್ ಫೋಟೊ ತೆಗೆಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಅಂಬೇಡ್ಕರ್‌ರವರಿಗೆ ಅಪಚಾರ ಮಾಡಿದ್ದಾರೆ, ಆ ಮೂಲಕ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದು ದಲಿತರ ಮೇಲೆ ನಡೆದಿರುವ ದೌರ್ಜನ್ಯವಾಗಿದ್ದು, ಆ ನ್ಯಾಯಾಧೀಶರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ರಾಜ್ಯಾದ್ಯಂತ ದೂರು ದಾಖಲಿಸಲು ಕರೆ ನೀಡಲಾಗಿದೆ.

“ರಾಯಚೂರಿನಲ್ಲಿ ನಡೆದಿರುವುದು ಬಿಡಿ ಪ್ರಕರಣವಲ್ಲ. ವ್ಯವಸ್ಥಿತವಾಗಿ ಅಂಬೇಡ್ಕರ್‌ರನ್ನು ಮರೆವು ಮಾಡುವ, ಮರೆಯಿಸುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಡಿಸೆಂಬರ್ 06ರ ಅಂಬೇಡ್ಕರ್ ಪರಿನಿರ್ವಾಣದಂದು ಬೆಂಗಳೂರಿನ ವಿಧಾನಸೌಧ ಎದುರು ಇರುವ ಅಂಬೇಡ್ಕರ್ ಪ್ರತಿಮೆ ಎದುರು ಮಾಲಾರ್ಪಣೆ ಮಾಡಿ, ಅವರನ್ನು ಸ್ಮರಿಸಲಾಗುತ್ತಿತ್ತು. ಅದರೆ 2019ರಲ್ಲಿ ಯಡಿಯೂರಪ್ಪನವರು ಸಿಎಂ ಆದ ನಂತರ ಅದನ್ನು ಕಡೆಗಣಿಸಲಾಗುತ್ತಿದೆ. 2021ರ ಡಿಸೆಂಬರ್‌ 06 ರಂದು ಸಹ ಮಾಲಾರ್ಪಣೆ ಮಾಡದಿದ್ದಾಗ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಬೇಕಾಗಿತ್ತು. ಜೊತೆಗೆ ಜನವರಿ 26 ರಂದು ಸಹ ಗಣರಾಜ್ಯೋತ್ಸವದ ದಿನ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ. ಅದಕ್ಕೂ ಪ್ರತಿಭಟನೆ ನಡೆದ ನಂತರವಷ್ಟೇ ಕಾಟಾಚಾರಕ್ಕೆ ಮಾಲಾರ್ಪಣೆ ಮಾಡಲಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ಫೋಟೊ ತೆಗೆಸಿರುವುದು ಸಹ ಅದರ ಮುಂದುವರೆದ ಭಾಗವಾಗಿದ್ದು ಅಂಬೇಡ್ಕರ್‌ರವರನ್ನು ಮರೆ ಮಾಚುವ ಹುನ್ನಾರ ನಡೆಯುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹೈಕೋರ್ಟ್‌ನಲ್ಲಿ ನ್ಯಾಯಾಧೀಶರೊಬ್ಬರು “ದೇಶದ ಎಲ್ಲಾ ಕೋರ್ಟುಗಳಲ್ಲಿ ಮಹಾತ್ಮ ಗಾಂಧಿಯವರ ಫೋಟೊ ಮಾತ್ರ ಇರಬೇಕು ಎಂಬ ಸುತ್ತೋಲೆ ಹೊರಡಿಸಿದ್ದಾರೆ. ಇದು ಸರಿಯಾದುದ್ದಲ್ಲ. ದೇಶದ ಎಲ್ಲಾ ಕೋರ್ಟುಗಳಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೊ ಇಡುವಂತೆ ಒತ್ತಾಯಿಸಬೇಕಿದೆ” ಎಂಬ ಆಗ್ರಹ ಕೇಳಿಬಂತು.

ಹಿರಿಯ ವಕೀಲರಾದ ಎಸ್ ಬಾಲನ್‌ರವರು ಮಾತನಾಡಿ “ಇಡಿ ನ್ಯಾಯಾಂಗದಲ್ಲಿಯೇ ದಲಿತ ಪ್ರಾತಿನಿಧ್ಯ ತೀರಾ ಕನಿಷ್ಠ ಮಟ್ಟದಲ್ಲಿದೆ. ‘ಕರ್ನಾಟಕದಲ್ಲಿನ 45 ನ್ಯಾಯಾಧೀಶರಲ್ಲಿ 25 ಜನರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದು, 20 ಜನರು ಇತರೆ ಪ್ರಬಲ ಜಾತಿಗಳಿಗೆ ಸೇರಿದ್ದಾರೆ. ಒಬ್ಬರು ಮಾತ್ರ ದಲಿತ ಸಮುದಾಯಕ್ಕೆ ಸೇರಿದ್ದಾರೆ. ಇನ್ನು ನ್ಯಾಯಾಂಗದ ಉನ್ನತ ಅಧಿಕಾರಿ ಹುದ್ದೆಗಳಲ್ಲಿಯೂ ಸಹ ದಲಿತರಿಲ್ಲ. ಪ್ರತಿಭಾವಂತ ದಲಿತರಿದ್ದರೂ ಸಹ ಅವರಿಗೆ ಉನ್ನತ ಹುದ್ದೆಗಳನ್ನು ನೀಡುತ್ತಿಲ್ಲ. ಹಾಗಾಗಿ ನ್ಯಾಯಾಂಗದಲ್ಲಿ ಮೀಸಲಾತಿ ಜಾರಿಯಾಗಬೇಕು” ಎಂದು ಆಗ್ರಹಿಸಿದರು.

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಜ್ಜಾಗಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ದೇಶಕ್ಕೆ ಅದರ ಸಂವಿಧಾನವೇ ಮೂಲಾಧಾರವಾಗಿದೆ. ಸಂವಿಧಾನದ ಆಶಯದಂತೆ ಆ ದೇಶಗಳು ಕಾರ್ಯನಿರ್ವಹಿಸುತ್ತವೆ. ಭಾರತದ ಸಂವಿಧಾನದ ಶಿಲ್ಪಿ (Architect of Indian Constitution) ಎಂದು ಅಧಿಕೃತವಾಗಿ ಅಂಬೇಡ್ಕರ್‌ರನ್ನು ಹೆಸರಿಸಲಾಗಿದೆ. ಅಂತಹ ಸಂವಿಧಾನದ ಶಿಲ್ಪಿಯ ಫೋಟೊವನ್ನು ಕೋರ್ಟ್‌ಗಳಲ್ಲಿ ಇಡಬಾರದು ಎಂದರೆ ನಾಚಿಗೇಡಿನ ವಿಷಯ. ಹಾಗಾಗಿ ಎಲ್ಲಾ ಕೋರ್ಟುಗಳಲ್ಲಿ ಫೋಟೊ ಇಡುವಂತೆ ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ತುರ್ತು ಹಕ್ಕೊತ್ತಾಯವಾಗಿ ‘ಗಣರಾಜ್ಯೋತ್ಸವದ ದಿನ ಅಂಬೇಡ್ಕರ್ ಫೋಟೊ ಇರಬೇಕು ಎಲ್ಲಾ ಇಲಾಖೆಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದನ್ನು ಉಲ್ಲಂಘಿಸಿ ರಾಯಚೂರು ಜಿಲ್ಲಾಧಿಕಾರಿ ತಾಂತ್ರಿಕ ಕಾರಣವೊಡ್ಡಿ ಅಂಬೇಡ್ಕರ್ ಫೋಟೊ ತೆಗೆಸಿದ್ದಾರೆ. ಇದು ಗಂಭೀರ ಲೋಪವಾಗಿದ್ದು, ಅವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಕೂಡಲೇ ಹೈಕೋರ್ಟ್ ಎಲ್ಲಾ ನ್ಯಾಯಾಲಯಗಳಿಗೆ ಅಂಬೇಡ್ಕರ್ ಫೋಟೊ ಇರಬೇಕೆಂಬ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿ ಜನವರಿ 28ರ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಶುಕ್ರವಾರದ ಪ್ರತಿಭಟನೆ ನಂತರ ವಿಸ್ತೃತ ಸಭೆ ನಡೆಸಿ, ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಮತ್ತು ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ನಡೆಸಲು ಚಿಂತಿಸಲಾಯಿತು. ಸಭೆಯಲ್ಲಿ ಕಾರ್ಮಿಕ ಮುಖಂಡರಾದ ವರದರಾಜೇಂದ್ರ, ದಲಿತ ಮುಖಂಡರಾದ ಡಿ.ರಾಜಗೋಪಾಲ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ; ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...