Homeಮುಖಪುಟಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

- Advertisement -
- Advertisement -

ರಾಜಧಾನಿ ಪಣಜಿಯ ವಿ. ಎಂ. ಸಲ್ಗೋಕರ್ ಕಾನೂನು ಕಾಲೇಜ್‌ನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷ ಬಿತ್ತುತ್ತಿದ್ದಾರೆ, ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿ ABVP ಸಲ್ಲಿಸಿದ್ದ ದೂರಿಗೆ ಕಾಲೇಜು ಖಡಕ್ ಪ್ರತ್ಯುತ್ತರ ನೀಡಿದ್ದು, “ABVP ಗೆ ಇಂತಹ ಆಕ್ಷೇಪಣೆಗಳನ್ನೆತ್ತಲು ಯಾವುದೇ ಹಕ್ಕಿಲ್ಲ ಹಾಗೂ ಉಪನ್ಯಾಸಕಿಯನ್ನು ಸೇವೆಯಿಂದ ಕಿತ್ತು ಹಾಕುವುದಿಲ್ಲ” ಎಂದು ಹೇಳಿದೆ.

ಕಾಲೇಜಿನ ಆಡಳಿತ ಮಂಡಳಿಯ ಪ್ರತಿಕ್ರಿಯೆಯನ್ನು ABVP ಗೆ ಶನಿವಾರ ರಿಜಿಸ್ಟರ್ಡ್ ಪೋಸ್ಟ್ ಮೂಲಕ ರವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀರ್ ಅಲಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

“ಇದು ಕಾನೂನು ಕಾಲೇಜು ಆಗಿದ್ದು, ನಿಯಮಗಳ ಪಾಲನೆಯ ಜವಾಬ್ದಾರಿ ನಮಗಿದೆ. ಕಾನೂನಾತ್ಮಕವಾಗಿಯೂ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

ಕಳೆದ ತಿಂಗಳು ABVP ಕಾಲೇಜಿನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ವಿರುದ್ಧ ದೂರು ನೀಡಿ, “ಅವರು ಒಂದು ನಿರ್ದಿಷ್ಟ ಧರ್ಮ, ಸಮುದಾಯ ಹಾಗೂ ಜನರ ಗುಂಪಿನ ವಿರುದ್ಧ ಸಾಮಾಜಿಕವಾಗಿ ದ್ವೇಷ ಬಿತ್ತುತ್ತಿದ್ದಾರೆ” ಎಂದು ಆರೋಪಿಸಿತ್ತು. 24 ಗಂಟೆಗಳೊಳಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸೇವೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿತ್ತು.

ದೂರಿನ ವಿಚಾರಣೆಯನ್ನು ಕಾಲೇಜಿನ ತ್ರಿಸದಸ್ಯ ಆಂತರಿಕ ಸಮಿತಿ ನಡೆಸಿದ್ದು, “ಉಪನ್ಯಾಸಕಿಯ ವಿರುದ್ಧ ಮಾಡಿರುವ ಆಪಾದನೆಗೆ ಯಾವುದೇ ಸಾಕ್ಷ್ಯವನ್ನು ದೂರುದಾರರು ನೀಡಿಲ್ಲ ಹಾಗೂ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದೆ ಇರುವುದರಿಂದ ಕೇವಲ ಆಪಾದನೆಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ಅತ್ಯುತ್ತಮ ಉಪನ್ಯಾಸಕಿಯಾಗಿದ್ದು, ವಿದ್ಯಾರ್ಥಿಗಳು ಅವರು ಪಾಠ ಮಾಡುವ ವಿಧಾನದಿಂದ ಖುಷಿಯಾಗಿದ್ದಾರೆ. ABVP ನೀಡಿದ್ದ ದೂರಿನ ಅರ್ಜಿಯಲ್ಲಿ ಅದರ ಕೊಂಕಣ ಘಟಕದ ಜಂಟಿ ಕಾರ್ಯದರ್ಶಿ ಪ್ರಭಾ ನಾಯ್ಕ್ ಸಹಿ ಹಾಕಿದ್ದು ಅವರು ಕಾಲೇಜಿನ ವಿದ್ಯಾರ್ಥಿನಿಯಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಬಿವಿಪಿ ಪಾಪಿಗಳ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...