Homeಮುಖಪುಟಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

- Advertisement -
- Advertisement -

ರಾಜಧಾನಿ ಪಣಜಿಯ ವಿ. ಎಂ. ಸಲ್ಗೋಕರ್ ಕಾನೂನು ಕಾಲೇಜ್‌ನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷ ಬಿತ್ತುತ್ತಿದ್ದಾರೆ, ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿ ABVP ಸಲ್ಲಿಸಿದ್ದ ದೂರಿಗೆ ಕಾಲೇಜು ಖಡಕ್ ಪ್ರತ್ಯುತ್ತರ ನೀಡಿದ್ದು, “ABVP ಗೆ ಇಂತಹ ಆಕ್ಷೇಪಣೆಗಳನ್ನೆತ್ತಲು ಯಾವುದೇ ಹಕ್ಕಿಲ್ಲ ಹಾಗೂ ಉಪನ್ಯಾಸಕಿಯನ್ನು ಸೇವೆಯಿಂದ ಕಿತ್ತು ಹಾಕುವುದಿಲ್ಲ” ಎಂದು ಹೇಳಿದೆ.

ಕಾಲೇಜಿನ ಆಡಳಿತ ಮಂಡಳಿಯ ಪ್ರತಿಕ್ರಿಯೆಯನ್ನು ABVP ಗೆ ಶನಿವಾರ ರಿಜಿಸ್ಟರ್ಡ್ ಪೋಸ್ಟ್ ಮೂಲಕ ರವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀರ್ ಅಲಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

“ಇದು ಕಾನೂನು ಕಾಲೇಜು ಆಗಿದ್ದು, ನಿಯಮಗಳ ಪಾಲನೆಯ ಜವಾಬ್ದಾರಿ ನಮಗಿದೆ. ಕಾನೂನಾತ್ಮಕವಾಗಿಯೂ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

ಕಳೆದ ತಿಂಗಳು ABVP ಕಾಲೇಜಿನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ವಿರುದ್ಧ ದೂರು ನೀಡಿ, “ಅವರು ಒಂದು ನಿರ್ದಿಷ್ಟ ಧರ್ಮ, ಸಮುದಾಯ ಹಾಗೂ ಜನರ ಗುಂಪಿನ ವಿರುದ್ಧ ಸಾಮಾಜಿಕವಾಗಿ ದ್ವೇಷ ಬಿತ್ತುತ್ತಿದ್ದಾರೆ” ಎಂದು ಆರೋಪಿಸಿತ್ತು. 24 ಗಂಟೆಗಳೊಳಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸೇವೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿತ್ತು.

ದೂರಿನ ವಿಚಾರಣೆಯನ್ನು ಕಾಲೇಜಿನ ತ್ರಿಸದಸ್ಯ ಆಂತರಿಕ ಸಮಿತಿ ನಡೆಸಿದ್ದು, “ಉಪನ್ಯಾಸಕಿಯ ವಿರುದ್ಧ ಮಾಡಿರುವ ಆಪಾದನೆಗೆ ಯಾವುದೇ ಸಾಕ್ಷ್ಯವನ್ನು ದೂರುದಾರರು ನೀಡಿಲ್ಲ ಹಾಗೂ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದೆ ಇರುವುದರಿಂದ ಕೇವಲ ಆಪಾದನೆಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ಅತ್ಯುತ್ತಮ ಉಪನ್ಯಾಸಕಿಯಾಗಿದ್ದು, ವಿದ್ಯಾರ್ಥಿಗಳು ಅವರು ಪಾಠ ಮಾಡುವ ವಿಧಾನದಿಂದ ಖುಷಿಯಾಗಿದ್ದಾರೆ. ABVP ನೀಡಿದ್ದ ದೂರಿನ ಅರ್ಜಿಯಲ್ಲಿ ಅದರ ಕೊಂಕಣ ಘಟಕದ ಜಂಟಿ ಕಾರ್ಯದರ್ಶಿ ಪ್ರಭಾ ನಾಯ್ಕ್ ಸಹಿ ಹಾಕಿದ್ದು ಅವರು ಕಾಲೇಜಿನ ವಿದ್ಯಾರ್ಥಿನಿಯಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಬಿವಿಪಿ ಪಾಪಿಗಳ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...