Homeಮುಖಪುಟಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಉಪನ್ಯಾಸಕಿ ವಿರುದ್ದ ದೂರು: ABVP ಗೆ ಖಡಕ್ ಪ್ರತ್ಯುತ್ತರ ನೀಡಿದ ಗೋವಾ ಕಾಲೇಜು

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

- Advertisement -
- Advertisement -

ರಾಜಧಾನಿ ಪಣಜಿಯ ವಿ. ಎಂ. ಸಲ್ಗೋಕರ್ ಕಾನೂನು ಕಾಲೇಜ್‌ನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ನಿರ್ದಿಷ್ಟ ಧರ್ಮದ ಬಗ್ಗೆ ದ್ವೇಷ ಬಿತ್ತುತ್ತಿದ್ದಾರೆ, ಅವರನ್ನು ಹುದ್ದೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿ ABVP ಸಲ್ಲಿಸಿದ್ದ ದೂರಿಗೆ ಕಾಲೇಜು ಖಡಕ್ ಪ್ರತ್ಯುತ್ತರ ನೀಡಿದ್ದು, “ABVP ಗೆ ಇಂತಹ ಆಕ್ಷೇಪಣೆಗಳನ್ನೆತ್ತಲು ಯಾವುದೇ ಹಕ್ಕಿಲ್ಲ ಹಾಗೂ ಉಪನ್ಯಾಸಕಿಯನ್ನು ಸೇವೆಯಿಂದ ಕಿತ್ತು ಹಾಕುವುದಿಲ್ಲ” ಎಂದು ಹೇಳಿದೆ.

ಕಾಲೇಜಿನ ಆಡಳಿತ ಮಂಡಳಿಯ ಪ್ರತಿಕ್ರಿಯೆಯನ್ನು ABVP ಗೆ ಶನಿವಾರ ರಿಜಿಸ್ಟರ್ಡ್ ಪೋಸ್ಟ್ ಮೂಲಕ ರವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಬೀರ್ ಅಲಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

“ಇದು ಕಾನೂನು ಕಾಲೇಜು ಆಗಿದ್ದು, ನಿಯಮಗಳ ಪಾಲನೆಯ ಜವಾಬ್ದಾರಿ ನಮಗಿದೆ. ಕಾನೂನಾತ್ಮಕವಾಗಿಯೂ ಅವರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸುಕುಧಾರಿ ಹುಡುಗಿ ಎಬಿವಿಪಿ ಸದಸ್ಯೆ ಕೋಮಲ್‌ ಶರ್ಮಾ ಎಂದು ದೃಢಪಡಿಸಿದ ದೆಹಲಿ ಪೊಲೀಸರು

ಕಳೆದ ತಿಂಗಳು ABVP ಕಾಲೇಜಿನ ಉಪನ್ಯಾಸಕಿ ಪ್ರೊ. ಶಿಲ್ಪಾ ಸಿಂಗ್ ವಿರುದ್ಧ ದೂರು ನೀಡಿ, “ಅವರು ಒಂದು ನಿರ್ದಿಷ್ಟ ಧರ್ಮ, ಸಮುದಾಯ ಹಾಗೂ ಜನರ ಗುಂಪಿನ ವಿರುದ್ಧ ಸಾಮಾಜಿಕವಾಗಿ ದ್ವೇಷ ಬಿತ್ತುತ್ತಿದ್ದಾರೆ” ಎಂದು ಆರೋಪಿಸಿತ್ತು. 24 ಗಂಟೆಗಳೊಳಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸೇವೆಯಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿತ್ತು.

ದೂರಿನ ವಿಚಾರಣೆಯನ್ನು ಕಾಲೇಜಿನ ತ್ರಿಸದಸ್ಯ ಆಂತರಿಕ ಸಮಿತಿ ನಡೆಸಿದ್ದು, “ಉಪನ್ಯಾಸಕಿಯ ವಿರುದ್ಧ ಮಾಡಿರುವ ಆಪಾದನೆಗೆ ಯಾವುದೇ ಸಾಕ್ಷ್ಯವನ್ನು ದೂರುದಾರರು ನೀಡಿಲ್ಲ ಹಾಗೂ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದೆ ಇರುವುದರಿಂದ ಕೇವಲ ಆಪಾದನೆಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ಅತ್ಯುತ್ತಮ ಉಪನ್ಯಾಸಕಿಯಾಗಿದ್ದು, ವಿದ್ಯಾರ್ಥಿಗಳು ಅವರು ಪಾಠ ಮಾಡುವ ವಿಧಾನದಿಂದ ಖುಷಿಯಾಗಿದ್ದಾರೆ. ABVP ನೀಡಿದ್ದ ದೂರಿನ ಅರ್ಜಿಯಲ್ಲಿ ಅದರ ಕೊಂಕಣ ಘಟಕದ ಜಂಟಿ ಕಾರ್ಯದರ್ಶಿ ಪ್ರಭಾ ನಾಯ್ಕ್ ಸಹಿ ಹಾಕಿದ್ದು ಅವರು ಕಾಲೇಜಿನ ವಿದ್ಯಾರ್ಥಿನಿಯಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರೊ. ಶಿಲ್ಪಾ ಸಿಂಗ್ ತನ್ನ ಉಪನ್ಯಾಸದ ಸಮಯದಲ್ಲಿ ಮನುಸ್ಮೃತಿ ಸೇರಿದಂತೆ, ರೋಹಿತ್ ವೆಮುಲಾ, ಎಂ.ಎಂ. ಕಲ್ಬುರ್ಗಿ, ದಾಭೋಲ್ಕರ್ ಮುಂತಾದವರ‌‌ ಕುರಿತು ಮಾತನಾಡುತ್ತಾರೆ ಎಂದು ABVP ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: ಎಬಿವಿಪಿ ಪಾಪಿಗಳ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...