Homeಮುಖಪುಟಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ...

ಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ ಆಗ್ರಹ

- Advertisement -
- Advertisement -

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ್ದಕ್ಕೆ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ, ಹಾಸ್ಯನಟ ಸಮಯ್ ರೈನಾ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಔಪಚಾರಿಕ ದೂರು ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ತನಿಖೆ ನಡೆಯುತ್ತಿದೆ” ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ಬೀರ್ ಬೈಸೆಪ್ಸ್’ ಎಂದೇ ಹೆಸರು ಗಳಿಸಿರುವ ಪಾಡ್‌ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ, ಕಾರ್ಯಕ್ರಮದ ಇಡೀ ತಂಡದ ವಿರುದ್ದ ದೂರು ದಾಖಲಾಗಿದೆ.

ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಪಡೆದ ಆನ್‌ಲೈನ್ ಕಂಟೆಂಟ್ ಕ್ರಿಯೇಟರ್‌ಗಳಲ್ಲಿ ಅಲ್ಲಾಬಾದಿಯಾ ಕೂಡ ಒಬ್ಬರು. ಈ ಹಿಂದೆ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಾಬಾದಿಯಾ ಅವರು ಕೇಂದ್ರ ಸಂಪುಟ ಸಚಿವರ ಸರಣಿಯ ಸಂದರ್ಶನಗಳನ್ನು ನಡೆಸಿದ್ದರು.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲ್ಲಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದ್ದಾರೆ. 

ಪೋಷಕರು, ಲೈಂಗಿಕತೆಯ ವಿಷಯವನ್ನು ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲಾಬಾದಿಯ ಟೀಕೆಗೆ ಗುರಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚಾರ ಮಾಡುವ ರಣವೀರ್ ಅಲ್ಲಾಬಾದಿಯ, ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.  

ಆನ್‌ಲೈನ್ ಪ್ರಸಾರದ ಮೂಲಕ ಜನಪ್ರಿಯತೆ ಮತ್ತು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗವಹಿಸುವವರು ಉದ್ದೇಶಪೂರ್ವಕವಾಗಿ ಮಹಿಳೆಯರ ಖಾಸಗಿ ಭಾಗಗಳ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಜಾಗತಿಕವಾಗಿ ಪ್ರಸಾರವಾದ ಈ ಕಾರ್ಯಕ್ರಮ ಅಲ್ಲಾಬಾದಿಯ ಮಹಿಳೆಯರನ್ನು ಗುರಿಯಾಗಿಸಿ ನಗುವುದು ಮತ್ತು ಅನುಚಿತ ಹಾಸ್ಯಗಳನ್ನು ಮಾಡುವುದನ್ನು ಒಳಗೊಂಡಿದೆ. ಇದನ್ನು ದೂರುದಾರರು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

ಕುಟುಂಬದ ವಿಷಯದಲ್ಲಿ ನಾನು ಎಂದಿಗೂ ಅಗೌರವ ತೋರುವುದಿಲ್ಲ: ಅಲ್ಲಾಬಾದಿಯಾ

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಅಲ್ಲಾಬಾದಿಯಾ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆ ಅನುಚಿತ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಹೊಂದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

“ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಕ್ಷಮಿಸಿ” ಎಂದು ಅಲ್ಲಾಬಾದಿಯಾ ವಿಡಿಯೋದಲ್ಲಿ ಹೇಳಿದ್ದಾರೆ. “ನನ್ನ ಹೇಳಿಕೆ ಕೇವಲ ಅನುಚಿತವಾಗಿರಲಿಲ್ಲ, ಅದು ತಮಾಷೆಯೂ ಆಗಿರಲಿಲ್ಲ. ಹಾಸ್ಯ ನನ್ನ ಸಾಮರ್ಥ್ಯವಲ್ಲ. ವೈಯಕ್ತಿಕವಾಗಿ ನಾನು ನಿರ್ಣಯಿಸುವಲ್ಲಿ ಒಂದು ಲೋಪವನ್ನು ಹೊಂದಿದ್ದೇನೆ, ಅದು ಸಾಮಾನ್ಯ ವಿಷಯವಲ್ಲ. ವಿಶೇಷವಾಗಿ ಎಲ್ಲಾ ವಯಸ್ಸಿನ ಜನರು ವೀಕ್ಷಿಸುವ ವೇದಿಕೆಯಲ್ಲಿ” ಎಂದಿದ್ದಾರೆ.

“ತಾನು ಆ ವೇದಿಕೆಯನ್ನು ಜವಾಬ್ದಾರಿಯಿಂದ ಬಳಸಬೇಕಿತ್ತು ಎಂದಿರುವ ಅಲ್ಲಾಬಾದಿಯಾ, ಕುಟುಂಬವನ್ನು ಅವಮಾನಿಸುವುದು ಎಂದಿಗೂ ನನಗೆ ಅಷ್ಟೊಂದು ಕನಿಷ್ಠ ವಿಷಯವಿಲ್ಲ. ಈ ವೇದಿಕೆಯನ್ನು ಉತ್ತಮವಾಗಿ ಬಳಸಬೇಕಿದೆ. ಅದು ಇಡೀ ಅನುಭವದಿಂದ ನಾನು ಕಲಿತ ಪಾಠ” ಎಂದು ಹೇಳಿದ್ದಾರೆ.

“ವಿಡಿಯೊದ ಸೂಕ್ಷ್ಮವಲ್ಲದ ಭಾಗಗಳನ್ನು ತೆಗೆದುಹಾಕುವಂತೆ ನಿರ್ಮಾಪಕರನ್ನು ವಿನಂತಿಸಿದ್ದೇನೆ. ಮುಂದೆ ಸುಧಾರಿಸುವುದಾಗಿ ಭರವಸೆ ನೀಡಿದ್ದೇನೆ. ಕ್ಷಮಿಸಿ ಎಂದಷ್ಟೇ ನಾನು ಹೇಳಬಲ್ಲೆ, ನೀವು ಮನುಷ್ಯರಾಗಿ ನನ್ನನ್ನು ಕ್ಷಮಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ: ದೂರು

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗಿದೆ. ಮಹಿಳೆಯರ ಘನತೆಗೆ ಉಂಟಾಗುವ ಹಾನಿ ಅಥವಾ ಯುವ ಪ್ರೇಕ್ಷಕರ ಮೇಲೆ, ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಬಗ್ಗೆ ಯಾವುದೇ ಗಮನ ಹರಿಸಲಾಗಿಲ್ಲ ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ನನಗೆ ಅದರ ಬಗ್ಗೆ ಮಾಹಿತಿ ದೊರೆತಿದೆ. ನಾನು ಇನ್ನೂ ವಿಡಿಯೋ ನೋಡಿಲ್ಲ. ವಿಷಯಗಳನ್ನು ತಪ್ಪಾದ ರೀತಿಯಲ್ಲಿ ಹೇಳಲಾಗಿದೆ ಮತ್ತು ಪ್ರಸ್ತುತಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ, ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ, ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಕೂಡ ರಣವೀರ್ ಅಲ್ಲಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ವಿಡಿಯೋ ತುಂಬಾ ಆಘಾತಕಾರಿಯಾಗಿದೆ. ಮಹಿಳೆಯಾಗಿರಲಿ, ಪುರುಷನಾಗಿರಲಿ, ಈ ರೀತಿಯ ಹಾಸ್ಯವನ್ನು ಸಮಾಜ ಎಂದಿಗೂ ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಾಯಿ ಅಥವಾ ಮಹಿಳೆಯ ದೇಹದ ಬಗ್ಗೆ ಹಾಸ್ಯ ಮಾಡುವುದು ಒಳ್ಳೆಯದಲ್ಲ. ಎಲ್ಲೋ ಇಂದಿನ ಯುವಕರು ನೈತಿಕವಾಗಿ ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ. ಇಂತಹ ಹಾಸ್ಯಗಳು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವ ಇತರರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುತ್ತೇನೆ. ಕ್ರಮ ಕೈಗೊಳ್ಳಲು ನಾನು ಆ ವಿಡಿಯೋವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.

ಶಿವಸೇನೆಯು ತನ್ನ ವಕ್ತಾರ ರಾಜು ವಾಗ್ಮರೆ ಮೂಲಕ ರಣವೀರ್ ಅಲ್ಲಾಬಾದಿಯಾ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ನೀಡಿದ ಹೇಳಿಕೆಗಳನ್ನು ಖಂಡಿಸಿದೆ

“ಶಿವಾಜಿ ಮಹಾರಾಜರ ಪರಂಪರೆಯಡಿಯಲ್ಲಿ, ಮಹಾರಾಷ್ಟ್ರ ರಾಜ್ಯದಲ್ಲಿ ಇಂತಹ ಭಾಷೆಯನ್ನು ಸಹಿಸಲಾಗುವುದಿಲ್ಲ. ಅವರು ಇದನ್ನೆಲ್ಲಾ ತಕ್ಷಣವೇ ನಿಲ್ಲಿಸಬೇಕು; ಇಲ್ಲದಿದ್ದರೆ ನಾವು ನಮ್ಮದೇ ಆದ ಶೈಲಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಜು ವಾಗ್ಮರೆ ಕಾರ್ಯಕ್ರಮದ ನಿರ್ಮಾಪಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...