Homeಮುಖಪುಟಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ...

ಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ ಆಗ್ರಹ

- Advertisement -
- Advertisement -

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ್ದಕ್ಕೆ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ, ಹಾಸ್ಯನಟ ಸಮಯ್ ರೈನಾ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಔಪಚಾರಿಕ ದೂರು ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ತನಿಖೆ ನಡೆಯುತ್ತಿದೆ” ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ಬೀರ್ ಬೈಸೆಪ್ಸ್’ ಎಂದೇ ಹೆಸರು ಗಳಿಸಿರುವ ಪಾಡ್‌ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ, ಕಾರ್ಯಕ್ರಮದ ಇಡೀ ತಂಡದ ವಿರುದ್ದ ದೂರು ದಾಖಲಾಗಿದೆ.

ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಪಡೆದ ಆನ್‌ಲೈನ್ ಕಂಟೆಂಟ್ ಕ್ರಿಯೇಟರ್‌ಗಳಲ್ಲಿ ಅಲ್ಲಾಬಾದಿಯಾ ಕೂಡ ಒಬ್ಬರು. ಈ ಹಿಂದೆ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಾಬಾದಿಯಾ ಅವರು ಕೇಂದ್ರ ಸಂಪುಟ ಸಚಿವರ ಸರಣಿಯ ಸಂದರ್ಶನಗಳನ್ನು ನಡೆಸಿದ್ದರು.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲ್ಲಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದ್ದಾರೆ. 

ಪೋಷಕರು, ಲೈಂಗಿಕತೆಯ ವಿಷಯವನ್ನು ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲಾಬಾದಿಯ ಟೀಕೆಗೆ ಗುರಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚಾರ ಮಾಡುವ ರಣವೀರ್ ಅಲ್ಲಾಬಾದಿಯ, ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.  

ಆನ್‌ಲೈನ್ ಪ್ರಸಾರದ ಮೂಲಕ ಜನಪ್ರಿಯತೆ ಮತ್ತು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗವಹಿಸುವವರು ಉದ್ದೇಶಪೂರ್ವಕವಾಗಿ ಮಹಿಳೆಯರ ಖಾಸಗಿ ಭಾಗಗಳ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಜಾಗತಿಕವಾಗಿ ಪ್ರಸಾರವಾದ ಈ ಕಾರ್ಯಕ್ರಮ ಅಲ್ಲಾಬಾದಿಯ ಮಹಿಳೆಯರನ್ನು ಗುರಿಯಾಗಿಸಿ ನಗುವುದು ಮತ್ತು ಅನುಚಿತ ಹಾಸ್ಯಗಳನ್ನು ಮಾಡುವುದನ್ನು ಒಳಗೊಂಡಿದೆ. ಇದನ್ನು ದೂರುದಾರರು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

ಕುಟುಂಬದ ವಿಷಯದಲ್ಲಿ ನಾನು ಎಂದಿಗೂ ಅಗೌರವ ತೋರುವುದಿಲ್ಲ: ಅಲ್ಲಾಬಾದಿಯಾ

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಅಲ್ಲಾಬಾದಿಯಾ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆ ಅನುಚಿತ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಹೊಂದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

“ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಕ್ಷಮಿಸಿ” ಎಂದು ಅಲ್ಲಾಬಾದಿಯಾ ವಿಡಿಯೋದಲ್ಲಿ ಹೇಳಿದ್ದಾರೆ. “ನನ್ನ ಹೇಳಿಕೆ ಕೇವಲ ಅನುಚಿತವಾಗಿರಲಿಲ್ಲ, ಅದು ತಮಾಷೆಯೂ ಆಗಿರಲಿಲ್ಲ. ಹಾಸ್ಯ ನನ್ನ ಸಾಮರ್ಥ್ಯವಲ್ಲ. ವೈಯಕ್ತಿಕವಾಗಿ ನಾನು ನಿರ್ಣಯಿಸುವಲ್ಲಿ ಒಂದು ಲೋಪವನ್ನು ಹೊಂದಿದ್ದೇನೆ, ಅದು ಸಾಮಾನ್ಯ ವಿಷಯವಲ್ಲ. ವಿಶೇಷವಾಗಿ ಎಲ್ಲಾ ವಯಸ್ಸಿನ ಜನರು ವೀಕ್ಷಿಸುವ ವೇದಿಕೆಯಲ್ಲಿ” ಎಂದಿದ್ದಾರೆ.

“ತಾನು ಆ ವೇದಿಕೆಯನ್ನು ಜವಾಬ್ದಾರಿಯಿಂದ ಬಳಸಬೇಕಿತ್ತು ಎಂದಿರುವ ಅಲ್ಲಾಬಾದಿಯಾ, ಕುಟುಂಬವನ್ನು ಅವಮಾನಿಸುವುದು ಎಂದಿಗೂ ನನಗೆ ಅಷ್ಟೊಂದು ಕನಿಷ್ಠ ವಿಷಯವಿಲ್ಲ. ಈ ವೇದಿಕೆಯನ್ನು ಉತ್ತಮವಾಗಿ ಬಳಸಬೇಕಿದೆ. ಅದು ಇಡೀ ಅನುಭವದಿಂದ ನಾನು ಕಲಿತ ಪಾಠ” ಎಂದು ಹೇಳಿದ್ದಾರೆ.

“ವಿಡಿಯೊದ ಸೂಕ್ಷ್ಮವಲ್ಲದ ಭಾಗಗಳನ್ನು ತೆಗೆದುಹಾಕುವಂತೆ ನಿರ್ಮಾಪಕರನ್ನು ವಿನಂತಿಸಿದ್ದೇನೆ. ಮುಂದೆ ಸುಧಾರಿಸುವುದಾಗಿ ಭರವಸೆ ನೀಡಿದ್ದೇನೆ. ಕ್ಷಮಿಸಿ ಎಂದಷ್ಟೇ ನಾನು ಹೇಳಬಲ್ಲೆ, ನೀವು ಮನುಷ್ಯರಾಗಿ ನನ್ನನ್ನು ಕ್ಷಮಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ: ದೂರು

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗಿದೆ. ಮಹಿಳೆಯರ ಘನತೆಗೆ ಉಂಟಾಗುವ ಹಾನಿ ಅಥವಾ ಯುವ ಪ್ರೇಕ್ಷಕರ ಮೇಲೆ, ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಬಗ್ಗೆ ಯಾವುದೇ ಗಮನ ಹರಿಸಲಾಗಿಲ್ಲ ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ನನಗೆ ಅದರ ಬಗ್ಗೆ ಮಾಹಿತಿ ದೊರೆತಿದೆ. ನಾನು ಇನ್ನೂ ವಿಡಿಯೋ ನೋಡಿಲ್ಲ. ವಿಷಯಗಳನ್ನು ತಪ್ಪಾದ ರೀತಿಯಲ್ಲಿ ಹೇಳಲಾಗಿದೆ ಮತ್ತು ಪ್ರಸ್ತುತಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ, ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ, ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಕೂಡ ರಣವೀರ್ ಅಲ್ಲಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ವಿಡಿಯೋ ತುಂಬಾ ಆಘಾತಕಾರಿಯಾಗಿದೆ. ಮಹಿಳೆಯಾಗಿರಲಿ, ಪುರುಷನಾಗಿರಲಿ, ಈ ರೀತಿಯ ಹಾಸ್ಯವನ್ನು ಸಮಾಜ ಎಂದಿಗೂ ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಾಯಿ ಅಥವಾ ಮಹಿಳೆಯ ದೇಹದ ಬಗ್ಗೆ ಹಾಸ್ಯ ಮಾಡುವುದು ಒಳ್ಳೆಯದಲ್ಲ. ಎಲ್ಲೋ ಇಂದಿನ ಯುವಕರು ನೈತಿಕವಾಗಿ ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ. ಇಂತಹ ಹಾಸ್ಯಗಳು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವ ಇತರರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುತ್ತೇನೆ. ಕ್ರಮ ಕೈಗೊಳ್ಳಲು ನಾನು ಆ ವಿಡಿಯೋವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.

ಶಿವಸೇನೆಯು ತನ್ನ ವಕ್ತಾರ ರಾಜು ವಾಗ್ಮರೆ ಮೂಲಕ ರಣವೀರ್ ಅಲ್ಲಾಬಾದಿಯಾ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ನೀಡಿದ ಹೇಳಿಕೆಗಳನ್ನು ಖಂಡಿಸಿದೆ

“ಶಿವಾಜಿ ಮಹಾರಾಜರ ಪರಂಪರೆಯಡಿಯಲ್ಲಿ, ಮಹಾರಾಷ್ಟ್ರ ರಾಜ್ಯದಲ್ಲಿ ಇಂತಹ ಭಾಷೆಯನ್ನು ಸಹಿಸಲಾಗುವುದಿಲ್ಲ. ಅವರು ಇದನ್ನೆಲ್ಲಾ ತಕ್ಷಣವೇ ನಿಲ್ಲಿಸಬೇಕು; ಇಲ್ಲದಿದ್ದರೆ ನಾವು ನಮ್ಮದೇ ಆದ ಶೈಲಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಜು ವಾಗ್ಮರೆ ಕಾರ್ಯಕ್ರಮದ ನಿರ್ಮಾಪಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...