Homeಮುಖಪುಟಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ...

ಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ ಆಗ್ರಹ

- Advertisement -
- Advertisement -

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ್ದಕ್ಕೆ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ, ಹಾಸ್ಯನಟ ಸಮಯ್ ರೈನಾ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಔಪಚಾರಿಕ ದೂರು ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ತನಿಖೆ ನಡೆಯುತ್ತಿದೆ” ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ಬೀರ್ ಬೈಸೆಪ್ಸ್’ ಎಂದೇ ಹೆಸರು ಗಳಿಸಿರುವ ಪಾಡ್‌ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ, ಕಾರ್ಯಕ್ರಮದ ಇಡೀ ತಂಡದ ವಿರುದ್ದ ದೂರು ದಾಖಲಾಗಿದೆ.

ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಪಡೆದ ಆನ್‌ಲೈನ್ ಕಂಟೆಂಟ್ ಕ್ರಿಯೇಟರ್‌ಗಳಲ್ಲಿ ಅಲ್ಲಾಬಾದಿಯಾ ಕೂಡ ಒಬ್ಬರು. ಈ ಹಿಂದೆ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಾಬಾದಿಯಾ ಅವರು ಕೇಂದ್ರ ಸಂಪುಟ ಸಚಿವರ ಸರಣಿಯ ಸಂದರ್ಶನಗಳನ್ನು ನಡೆಸಿದ್ದರು.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲ್ಲಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದ್ದಾರೆ. 

ಪೋಷಕರು, ಲೈಂಗಿಕತೆಯ ವಿಷಯವನ್ನು ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲಾಬಾದಿಯ ಟೀಕೆಗೆ ಗುರಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚಾರ ಮಾಡುವ ರಣವೀರ್ ಅಲ್ಲಾಬಾದಿಯ, ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.  

ಆನ್‌ಲೈನ್ ಪ್ರಸಾರದ ಮೂಲಕ ಜನಪ್ರಿಯತೆ ಮತ್ತು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗವಹಿಸುವವರು ಉದ್ದೇಶಪೂರ್ವಕವಾಗಿ ಮಹಿಳೆಯರ ಖಾಸಗಿ ಭಾಗಗಳ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಜಾಗತಿಕವಾಗಿ ಪ್ರಸಾರವಾದ ಈ ಕಾರ್ಯಕ್ರಮ ಅಲ್ಲಾಬಾದಿಯ ಮಹಿಳೆಯರನ್ನು ಗುರಿಯಾಗಿಸಿ ನಗುವುದು ಮತ್ತು ಅನುಚಿತ ಹಾಸ್ಯಗಳನ್ನು ಮಾಡುವುದನ್ನು ಒಳಗೊಂಡಿದೆ. ಇದನ್ನು ದೂರುದಾರರು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

ಕುಟುಂಬದ ವಿಷಯದಲ್ಲಿ ನಾನು ಎಂದಿಗೂ ಅಗೌರವ ತೋರುವುದಿಲ್ಲ: ಅಲ್ಲಾಬಾದಿಯಾ

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಅಲ್ಲಾಬಾದಿಯಾ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆ ಅನುಚಿತ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಹೊಂದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

“ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಕ್ಷಮಿಸಿ” ಎಂದು ಅಲ್ಲಾಬಾದಿಯಾ ವಿಡಿಯೋದಲ್ಲಿ ಹೇಳಿದ್ದಾರೆ. “ನನ್ನ ಹೇಳಿಕೆ ಕೇವಲ ಅನುಚಿತವಾಗಿರಲಿಲ್ಲ, ಅದು ತಮಾಷೆಯೂ ಆಗಿರಲಿಲ್ಲ. ಹಾಸ್ಯ ನನ್ನ ಸಾಮರ್ಥ್ಯವಲ್ಲ. ವೈಯಕ್ತಿಕವಾಗಿ ನಾನು ನಿರ್ಣಯಿಸುವಲ್ಲಿ ಒಂದು ಲೋಪವನ್ನು ಹೊಂದಿದ್ದೇನೆ, ಅದು ಸಾಮಾನ್ಯ ವಿಷಯವಲ್ಲ. ವಿಶೇಷವಾಗಿ ಎಲ್ಲಾ ವಯಸ್ಸಿನ ಜನರು ವೀಕ್ಷಿಸುವ ವೇದಿಕೆಯಲ್ಲಿ” ಎಂದಿದ್ದಾರೆ.

“ತಾನು ಆ ವೇದಿಕೆಯನ್ನು ಜವಾಬ್ದಾರಿಯಿಂದ ಬಳಸಬೇಕಿತ್ತು ಎಂದಿರುವ ಅಲ್ಲಾಬಾದಿಯಾ, ಕುಟುಂಬವನ್ನು ಅವಮಾನಿಸುವುದು ಎಂದಿಗೂ ನನಗೆ ಅಷ್ಟೊಂದು ಕನಿಷ್ಠ ವಿಷಯವಿಲ್ಲ. ಈ ವೇದಿಕೆಯನ್ನು ಉತ್ತಮವಾಗಿ ಬಳಸಬೇಕಿದೆ. ಅದು ಇಡೀ ಅನುಭವದಿಂದ ನಾನು ಕಲಿತ ಪಾಠ” ಎಂದು ಹೇಳಿದ್ದಾರೆ.

“ವಿಡಿಯೊದ ಸೂಕ್ಷ್ಮವಲ್ಲದ ಭಾಗಗಳನ್ನು ತೆಗೆದುಹಾಕುವಂತೆ ನಿರ್ಮಾಪಕರನ್ನು ವಿನಂತಿಸಿದ್ದೇನೆ. ಮುಂದೆ ಸುಧಾರಿಸುವುದಾಗಿ ಭರವಸೆ ನೀಡಿದ್ದೇನೆ. ಕ್ಷಮಿಸಿ ಎಂದಷ್ಟೇ ನಾನು ಹೇಳಬಲ್ಲೆ, ನೀವು ಮನುಷ್ಯರಾಗಿ ನನ್ನನ್ನು ಕ್ಷಮಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ: ದೂರು

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗಿದೆ. ಮಹಿಳೆಯರ ಘನತೆಗೆ ಉಂಟಾಗುವ ಹಾನಿ ಅಥವಾ ಯುವ ಪ್ರೇಕ್ಷಕರ ಮೇಲೆ, ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಬಗ್ಗೆ ಯಾವುದೇ ಗಮನ ಹರಿಸಲಾಗಿಲ್ಲ ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ನನಗೆ ಅದರ ಬಗ್ಗೆ ಮಾಹಿತಿ ದೊರೆತಿದೆ. ನಾನು ಇನ್ನೂ ವಿಡಿಯೋ ನೋಡಿಲ್ಲ. ವಿಷಯಗಳನ್ನು ತಪ್ಪಾದ ರೀತಿಯಲ್ಲಿ ಹೇಳಲಾಗಿದೆ ಮತ್ತು ಪ್ರಸ್ತುತಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ, ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ, ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಕೂಡ ರಣವೀರ್ ಅಲ್ಲಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ವಿಡಿಯೋ ತುಂಬಾ ಆಘಾತಕಾರಿಯಾಗಿದೆ. ಮಹಿಳೆಯಾಗಿರಲಿ, ಪುರುಷನಾಗಿರಲಿ, ಈ ರೀತಿಯ ಹಾಸ್ಯವನ್ನು ಸಮಾಜ ಎಂದಿಗೂ ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಾಯಿ ಅಥವಾ ಮಹಿಳೆಯ ದೇಹದ ಬಗ್ಗೆ ಹಾಸ್ಯ ಮಾಡುವುದು ಒಳ್ಳೆಯದಲ್ಲ. ಎಲ್ಲೋ ಇಂದಿನ ಯುವಕರು ನೈತಿಕವಾಗಿ ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ. ಇಂತಹ ಹಾಸ್ಯಗಳು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವ ಇತರರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುತ್ತೇನೆ. ಕ್ರಮ ಕೈಗೊಳ್ಳಲು ನಾನು ಆ ವಿಡಿಯೋವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.

ಶಿವಸೇನೆಯು ತನ್ನ ವಕ್ತಾರ ರಾಜು ವಾಗ್ಮರೆ ಮೂಲಕ ರಣವೀರ್ ಅಲ್ಲಾಬಾದಿಯಾ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ನೀಡಿದ ಹೇಳಿಕೆಗಳನ್ನು ಖಂಡಿಸಿದೆ

“ಶಿವಾಜಿ ಮಹಾರಾಜರ ಪರಂಪರೆಯಡಿಯಲ್ಲಿ, ಮಹಾರಾಷ್ಟ್ರ ರಾಜ್ಯದಲ್ಲಿ ಇಂತಹ ಭಾಷೆಯನ್ನು ಸಹಿಸಲಾಗುವುದಿಲ್ಲ. ಅವರು ಇದನ್ನೆಲ್ಲಾ ತಕ್ಷಣವೇ ನಿಲ್ಲಿಸಬೇಕು; ಇಲ್ಲದಿದ್ದರೆ ನಾವು ನಮ್ಮದೇ ಆದ ಶೈಲಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಜು ವಾಗ್ಮರೆ ಕಾರ್ಯಕ್ರಮದ ನಿರ್ಮಾಪಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...