Homeಮುಖಪುಟಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು...!!

ಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು…!!

- Advertisement -
- Advertisement -

ತಾನು ಕೊರೊನಾ ವೈರಸ್ ಸೋಂಕಿತಳಾಗಿದ್ದೇನೆ ಎಂದು ಗಾಯಕಿ ಕನಿಕಾ ಕಫೂರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ, “ನಿರ್ಲಕ್ಷ್ಯ” ಆರೋಪದಲ್ಲಿ ಲಕ್ನೋ ಮುಖ್ಯ ವೈಧ್ಯಾಧಿಕಾರಿಯವರ ದೂರಿನ ಆಧಾರದಲ್ಲಿ ಪೊಲೀಸರು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 14 ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿದಾಗ ಹೆಚ್ಚಿನ ವೈರಲ್ ಲೋಡ್ ಪತ್ತೆಯಾಗಿದ್ದು ಅವರನ್ನು ಮನೆಯಲ್ಲೆ ಸಂಪರ್ಕತಡೆಯಲ್ಲಿರಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೂ ಅವರು ಅದನ್ನು ಉಲ್ಲಂಘಿಸಿ ಲಖನೌದಲ್ಲಿ ಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ದೆಹಲಿಯ ಸಂಸತ್ತು ಮತ್ತು ರಾಷ್ಟ್ರಪತಿ ಭವನದ ಹಲವಾರು ಹಿರಿಯ ರಾಜಕಾರಣಿಗಳು ಭಾಗವಹಿಸಿದ್ದರು. ಹಾಗಾಗಿ ಕನಿಕಾ ಕಫೂರ್ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, ಮತ್ತು 270 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆದರೆ ಕನಿಕಾ ಕಫೂರ್ ತಾನು ಮಾರ್ಚ್ 11 ರಂದು ಲಕ್ನೋಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ 9 ತಿಂಗಳಿನಿಂದ ಲಂಡನಿನಲ್ಲಿದ್ದು, ಮಾರ್ಚ್ 9 ರಂದು ಮುಂಬೈ ವಿಮಾನ ನಿಲ್ದಾಣದಿಂದ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈಗ ಲಕ್ನೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು “ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಆದರೆ ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ ಹಾಗೂ ಕರೋನವೈರಸ್ ಇತ್ತು ಎಂಬುವುದು ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಾಗುವ ಮೊದಲು ಕನಿಕಾ ಕಫೂರ್ ಭಾಗವಹಿಸಿದ ಭೋಜನಕೂಟದಲ್ಲಿ ಅತಿಥಿಯಾಗಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ “ನಮ್ಮ ಕಡೆಯಿಂದ ತಪ್ಪುಗಳಾಗಿದೆ. ಸೋಂಕು ಇರುವ ಬಗ್ಗೆ ಪತ್ತೆ ಹಚ್ಚದೆ ಕನಿಕಾ ಕಫೂರ್ ವಿಮಾನ ನಿಲ್ದಾಣದಿಂದ ಹೇಗೆ ಹೊರ ಹೋದರು ಎಂಬುದರ ಬಗ್ಗೆ ಅಧಿಕಾರಿಗಳನ್ನು ಕೇಳಲಿದ್ದೇನೆ” ಎಂದು ಹೇಳಿದ್ದಾರೆ. ಸಚಿವರು ಸಹ ಈಗ ಸ್ವಯಂ ಸಂಪರ್ಕತಡೆಯಲ್ಲಿದ್ದಾರೆ.

ಶುಕ್ರವಾರ ಗಾಯಕಿ ಸೋಶಿಯಲ್ ಮೀಡಿಯಾದಲ್ಲಿ ತನಗೆ ಸೋಂಕು ಇರುವುದನ್ನು ಹಾಗೂ ಪ್ರತ್ಯೇಕವಾಗಿರುವುದನ್ನು ಹಂಚಿಕೊಂಡಿದ್ದರು. ಇದರ ನಂತರ ಬಿಜೆಪಿ ಮುಖಂಡೆ ವಸುಂಧರಾ ರಾಜೆ ಟ್ವೀಟ್ ಮಾಡಿ “ತಾನೂ ಕನಿಕಾ ಕಫೂರ್ ಭಾಗವಹಿಸಿದ್ದ ಭೋಜನ ಕೂಟದಲ್ಲಿ ತನ್ನ ಮಗ ದುಷ್ಯಂತ್ ಜೊತೆ ಭಾಗವಹಿಸಿದ್ದೆ. ಮುನ್ನಚ್ಚರಿಕಾ ಕ್ರಮವಾಗಿ ನಾನು ಸ್ವಯಂ ಸಂಪರ್ಕತಡೆಯನ್ನು ಮಾಡಲಿದ್ದೇನೆ” ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುಶ್ಯಂತ್ ಸಿಂಗ್ ಅವರನ್ನು ಭೇಟಿಯಾದ್ದರು. ಈಗ ರಾಷ್ಟ್ರಪತಿಗಳು ತಮ್ಮ ಎಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ಕಳೆದ ಒಂದು ವಾರದಲ್ಲಿ ಕನಿಕಾ ಕಫೂರ್ ಭಾಗವಹಿಸಿದ ಸಾಮಾಜಿಕ ಕೂಟಗಳ ಬಗ್ಗೆ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ಕುರಿತು ಸರಕಾರದ ಆದೇಶದ ಹೊರತಾಗಿಯೂ ದೊಡ್ಡ ಸಭೆಗಳಲ್ಲಿ ಹಿರಿಯ ರಾಜಕಾರಣಿಗಳು ಈ ರೀತಿಯ ಭೋಜನಕೂಟವನ್ನು ನಡೆಸುವ ಅಗತ್ಯವೇನಿತ್ತು? ಸೆಲೆಬ್ರಿಟಿಗಳು ಸಹ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಕನಿಕಾ ಪ್ರಕರಣ ಉಳಿದ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...