Homeಮುಖಪುಟಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು...!!

ಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು…!!

- Advertisement -
- Advertisement -

ತಾನು ಕೊರೊನಾ ವೈರಸ್ ಸೋಂಕಿತಳಾಗಿದ್ದೇನೆ ಎಂದು ಗಾಯಕಿ ಕನಿಕಾ ಕಫೂರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ, “ನಿರ್ಲಕ್ಷ್ಯ” ಆರೋಪದಲ್ಲಿ ಲಕ್ನೋ ಮುಖ್ಯ ವೈಧ್ಯಾಧಿಕಾರಿಯವರ ದೂರಿನ ಆಧಾರದಲ್ಲಿ ಪೊಲೀಸರು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 14 ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿದಾಗ ಹೆಚ್ಚಿನ ವೈರಲ್ ಲೋಡ್ ಪತ್ತೆಯಾಗಿದ್ದು ಅವರನ್ನು ಮನೆಯಲ್ಲೆ ಸಂಪರ್ಕತಡೆಯಲ್ಲಿರಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೂ ಅವರು ಅದನ್ನು ಉಲ್ಲಂಘಿಸಿ ಲಖನೌದಲ್ಲಿ ಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ದೆಹಲಿಯ ಸಂಸತ್ತು ಮತ್ತು ರಾಷ್ಟ್ರಪತಿ ಭವನದ ಹಲವಾರು ಹಿರಿಯ ರಾಜಕಾರಣಿಗಳು ಭಾಗವಹಿಸಿದ್ದರು. ಹಾಗಾಗಿ ಕನಿಕಾ ಕಫೂರ್ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, ಮತ್ತು 270 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆದರೆ ಕನಿಕಾ ಕಫೂರ್ ತಾನು ಮಾರ್ಚ್ 11 ರಂದು ಲಕ್ನೋಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ 9 ತಿಂಗಳಿನಿಂದ ಲಂಡನಿನಲ್ಲಿದ್ದು, ಮಾರ್ಚ್ 9 ರಂದು ಮುಂಬೈ ವಿಮಾನ ನಿಲ್ದಾಣದಿಂದ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈಗ ಲಕ್ನೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು “ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಆದರೆ ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ ಹಾಗೂ ಕರೋನವೈರಸ್ ಇತ್ತು ಎಂಬುವುದು ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಾಗುವ ಮೊದಲು ಕನಿಕಾ ಕಫೂರ್ ಭಾಗವಹಿಸಿದ ಭೋಜನಕೂಟದಲ್ಲಿ ಅತಿಥಿಯಾಗಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ “ನಮ್ಮ ಕಡೆಯಿಂದ ತಪ್ಪುಗಳಾಗಿದೆ. ಸೋಂಕು ಇರುವ ಬಗ್ಗೆ ಪತ್ತೆ ಹಚ್ಚದೆ ಕನಿಕಾ ಕಫೂರ್ ವಿಮಾನ ನಿಲ್ದಾಣದಿಂದ ಹೇಗೆ ಹೊರ ಹೋದರು ಎಂಬುದರ ಬಗ್ಗೆ ಅಧಿಕಾರಿಗಳನ್ನು ಕೇಳಲಿದ್ದೇನೆ” ಎಂದು ಹೇಳಿದ್ದಾರೆ. ಸಚಿವರು ಸಹ ಈಗ ಸ್ವಯಂ ಸಂಪರ್ಕತಡೆಯಲ್ಲಿದ್ದಾರೆ.

ಶುಕ್ರವಾರ ಗಾಯಕಿ ಸೋಶಿಯಲ್ ಮೀಡಿಯಾದಲ್ಲಿ ತನಗೆ ಸೋಂಕು ಇರುವುದನ್ನು ಹಾಗೂ ಪ್ರತ್ಯೇಕವಾಗಿರುವುದನ್ನು ಹಂಚಿಕೊಂಡಿದ್ದರು. ಇದರ ನಂತರ ಬಿಜೆಪಿ ಮುಖಂಡೆ ವಸುಂಧರಾ ರಾಜೆ ಟ್ವೀಟ್ ಮಾಡಿ “ತಾನೂ ಕನಿಕಾ ಕಫೂರ್ ಭಾಗವಹಿಸಿದ್ದ ಭೋಜನ ಕೂಟದಲ್ಲಿ ತನ್ನ ಮಗ ದುಷ್ಯಂತ್ ಜೊತೆ ಭಾಗವಹಿಸಿದ್ದೆ. ಮುನ್ನಚ್ಚರಿಕಾ ಕ್ರಮವಾಗಿ ನಾನು ಸ್ವಯಂ ಸಂಪರ್ಕತಡೆಯನ್ನು ಮಾಡಲಿದ್ದೇನೆ” ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುಶ್ಯಂತ್ ಸಿಂಗ್ ಅವರನ್ನು ಭೇಟಿಯಾದ್ದರು. ಈಗ ರಾಷ್ಟ್ರಪತಿಗಳು ತಮ್ಮ ಎಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ಕಳೆದ ಒಂದು ವಾರದಲ್ಲಿ ಕನಿಕಾ ಕಫೂರ್ ಭಾಗವಹಿಸಿದ ಸಾಮಾಜಿಕ ಕೂಟಗಳ ಬಗ್ಗೆ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ಕುರಿತು ಸರಕಾರದ ಆದೇಶದ ಹೊರತಾಗಿಯೂ ದೊಡ್ಡ ಸಭೆಗಳಲ್ಲಿ ಹಿರಿಯ ರಾಜಕಾರಣಿಗಳು ಈ ರೀತಿಯ ಭೋಜನಕೂಟವನ್ನು ನಡೆಸುವ ಅಗತ್ಯವೇನಿತ್ತು? ಸೆಲೆಬ್ರಿಟಿಗಳು ಸಹ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಕನಿಕಾ ಪ್ರಕರಣ ಉಳಿದ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...