Homeಮುಖಪುಟಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು...!!

ಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು…!!

- Advertisement -
- Advertisement -

ತಾನು ಕೊರೊನಾ ವೈರಸ್ ಸೋಂಕಿತಳಾಗಿದ್ದೇನೆ ಎಂದು ಗಾಯಕಿ ಕನಿಕಾ ಕಫೂರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ, “ನಿರ್ಲಕ್ಷ್ಯ” ಆರೋಪದಲ್ಲಿ ಲಕ್ನೋ ಮುಖ್ಯ ವೈಧ್ಯಾಧಿಕಾರಿಯವರ ದೂರಿನ ಆಧಾರದಲ್ಲಿ ಪೊಲೀಸರು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 14 ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿದಾಗ ಹೆಚ್ಚಿನ ವೈರಲ್ ಲೋಡ್ ಪತ್ತೆಯಾಗಿದ್ದು ಅವರನ್ನು ಮನೆಯಲ್ಲೆ ಸಂಪರ್ಕತಡೆಯಲ್ಲಿರಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೂ ಅವರು ಅದನ್ನು ಉಲ್ಲಂಘಿಸಿ ಲಖನೌದಲ್ಲಿ ಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ದೆಹಲಿಯ ಸಂಸತ್ತು ಮತ್ತು ರಾಷ್ಟ್ರಪತಿ ಭವನದ ಹಲವಾರು ಹಿರಿಯ ರಾಜಕಾರಣಿಗಳು ಭಾಗವಹಿಸಿದ್ದರು. ಹಾಗಾಗಿ ಕನಿಕಾ ಕಫೂರ್ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, ಮತ್ತು 270 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆದರೆ ಕನಿಕಾ ಕಫೂರ್ ತಾನು ಮಾರ್ಚ್ 11 ರಂದು ಲಕ್ನೋಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ 9 ತಿಂಗಳಿನಿಂದ ಲಂಡನಿನಲ್ಲಿದ್ದು, ಮಾರ್ಚ್ 9 ರಂದು ಮುಂಬೈ ವಿಮಾನ ನಿಲ್ದಾಣದಿಂದ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈಗ ಲಕ್ನೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು “ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಆದರೆ ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ ಹಾಗೂ ಕರೋನವೈರಸ್ ಇತ್ತು ಎಂಬುವುದು ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಾಗುವ ಮೊದಲು ಕನಿಕಾ ಕಫೂರ್ ಭಾಗವಹಿಸಿದ ಭೋಜನಕೂಟದಲ್ಲಿ ಅತಿಥಿಯಾಗಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ “ನಮ್ಮ ಕಡೆಯಿಂದ ತಪ್ಪುಗಳಾಗಿದೆ. ಸೋಂಕು ಇರುವ ಬಗ್ಗೆ ಪತ್ತೆ ಹಚ್ಚದೆ ಕನಿಕಾ ಕಫೂರ್ ವಿಮಾನ ನಿಲ್ದಾಣದಿಂದ ಹೇಗೆ ಹೊರ ಹೋದರು ಎಂಬುದರ ಬಗ್ಗೆ ಅಧಿಕಾರಿಗಳನ್ನು ಕೇಳಲಿದ್ದೇನೆ” ಎಂದು ಹೇಳಿದ್ದಾರೆ. ಸಚಿವರು ಸಹ ಈಗ ಸ್ವಯಂ ಸಂಪರ್ಕತಡೆಯಲ್ಲಿದ್ದಾರೆ.

ಶುಕ್ರವಾರ ಗಾಯಕಿ ಸೋಶಿಯಲ್ ಮೀಡಿಯಾದಲ್ಲಿ ತನಗೆ ಸೋಂಕು ಇರುವುದನ್ನು ಹಾಗೂ ಪ್ರತ್ಯೇಕವಾಗಿರುವುದನ್ನು ಹಂಚಿಕೊಂಡಿದ್ದರು. ಇದರ ನಂತರ ಬಿಜೆಪಿ ಮುಖಂಡೆ ವಸುಂಧರಾ ರಾಜೆ ಟ್ವೀಟ್ ಮಾಡಿ “ತಾನೂ ಕನಿಕಾ ಕಫೂರ್ ಭಾಗವಹಿಸಿದ್ದ ಭೋಜನ ಕೂಟದಲ್ಲಿ ತನ್ನ ಮಗ ದುಷ್ಯಂತ್ ಜೊತೆ ಭಾಗವಹಿಸಿದ್ದೆ. ಮುನ್ನಚ್ಚರಿಕಾ ಕ್ರಮವಾಗಿ ನಾನು ಸ್ವಯಂ ಸಂಪರ್ಕತಡೆಯನ್ನು ಮಾಡಲಿದ್ದೇನೆ” ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುಶ್ಯಂತ್ ಸಿಂಗ್ ಅವರನ್ನು ಭೇಟಿಯಾದ್ದರು. ಈಗ ರಾಷ್ಟ್ರಪತಿಗಳು ತಮ್ಮ ಎಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ಕಳೆದ ಒಂದು ವಾರದಲ್ಲಿ ಕನಿಕಾ ಕಫೂರ್ ಭಾಗವಹಿಸಿದ ಸಾಮಾಜಿಕ ಕೂಟಗಳ ಬಗ್ಗೆ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ಕುರಿತು ಸರಕಾರದ ಆದೇಶದ ಹೊರತಾಗಿಯೂ ದೊಡ್ಡ ಸಭೆಗಳಲ್ಲಿ ಹಿರಿಯ ರಾಜಕಾರಣಿಗಳು ಈ ರೀತಿಯ ಭೋಜನಕೂಟವನ್ನು ನಡೆಸುವ ಅಗತ್ಯವೇನಿತ್ತು? ಸೆಲೆಬ್ರಿಟಿಗಳು ಸಹ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಕನಿಕಾ ಪ್ರಕರಣ ಉಳಿದ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...