Homeಮುಖಪುಟಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು...!!

ಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು…!!

- Advertisement -
- Advertisement -

ತಾನು ಕೊರೊನಾ ವೈರಸ್ ಸೋಂಕಿತಳಾಗಿದ್ದೇನೆ ಎಂದು ಗಾಯಕಿ ಕನಿಕಾ ಕಫೂರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ, “ನಿರ್ಲಕ್ಷ್ಯ” ಆರೋಪದಲ್ಲಿ ಲಕ್ನೋ ಮುಖ್ಯ ವೈಧ್ಯಾಧಿಕಾರಿಯವರ ದೂರಿನ ಆಧಾರದಲ್ಲಿ ಪೊಲೀಸರು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 14 ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿದಾಗ ಹೆಚ್ಚಿನ ವೈರಲ್ ಲೋಡ್ ಪತ್ತೆಯಾಗಿದ್ದು ಅವರನ್ನು ಮನೆಯಲ್ಲೆ ಸಂಪರ್ಕತಡೆಯಲ್ಲಿರಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೂ ಅವರು ಅದನ್ನು ಉಲ್ಲಂಘಿಸಿ ಲಖನೌದಲ್ಲಿ ಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ದೆಹಲಿಯ ಸಂಸತ್ತು ಮತ್ತು ರಾಷ್ಟ್ರಪತಿ ಭವನದ ಹಲವಾರು ಹಿರಿಯ ರಾಜಕಾರಣಿಗಳು ಭಾಗವಹಿಸಿದ್ದರು. ಹಾಗಾಗಿ ಕನಿಕಾ ಕಫೂರ್ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, ಮತ್ತು 270 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆದರೆ ಕನಿಕಾ ಕಫೂರ್ ತಾನು ಮಾರ್ಚ್ 11 ರಂದು ಲಕ್ನೋಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ 9 ತಿಂಗಳಿನಿಂದ ಲಂಡನಿನಲ್ಲಿದ್ದು, ಮಾರ್ಚ್ 9 ರಂದು ಮುಂಬೈ ವಿಮಾನ ನಿಲ್ದಾಣದಿಂದ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈಗ ಲಕ್ನೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು “ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಆದರೆ ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ ಹಾಗೂ ಕರೋನವೈರಸ್ ಇತ್ತು ಎಂಬುವುದು ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಾಗುವ ಮೊದಲು ಕನಿಕಾ ಕಫೂರ್ ಭಾಗವಹಿಸಿದ ಭೋಜನಕೂಟದಲ್ಲಿ ಅತಿಥಿಯಾಗಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ “ನಮ್ಮ ಕಡೆಯಿಂದ ತಪ್ಪುಗಳಾಗಿದೆ. ಸೋಂಕು ಇರುವ ಬಗ್ಗೆ ಪತ್ತೆ ಹಚ್ಚದೆ ಕನಿಕಾ ಕಫೂರ್ ವಿಮಾನ ನಿಲ್ದಾಣದಿಂದ ಹೇಗೆ ಹೊರ ಹೋದರು ಎಂಬುದರ ಬಗ್ಗೆ ಅಧಿಕಾರಿಗಳನ್ನು ಕೇಳಲಿದ್ದೇನೆ” ಎಂದು ಹೇಳಿದ್ದಾರೆ. ಸಚಿವರು ಸಹ ಈಗ ಸ್ವಯಂ ಸಂಪರ್ಕತಡೆಯಲ್ಲಿದ್ದಾರೆ.

ಶುಕ್ರವಾರ ಗಾಯಕಿ ಸೋಶಿಯಲ್ ಮೀಡಿಯಾದಲ್ಲಿ ತನಗೆ ಸೋಂಕು ಇರುವುದನ್ನು ಹಾಗೂ ಪ್ರತ್ಯೇಕವಾಗಿರುವುದನ್ನು ಹಂಚಿಕೊಂಡಿದ್ದರು. ಇದರ ನಂತರ ಬಿಜೆಪಿ ಮುಖಂಡೆ ವಸುಂಧರಾ ರಾಜೆ ಟ್ವೀಟ್ ಮಾಡಿ “ತಾನೂ ಕನಿಕಾ ಕಫೂರ್ ಭಾಗವಹಿಸಿದ್ದ ಭೋಜನ ಕೂಟದಲ್ಲಿ ತನ್ನ ಮಗ ದುಷ್ಯಂತ್ ಜೊತೆ ಭಾಗವಹಿಸಿದ್ದೆ. ಮುನ್ನಚ್ಚರಿಕಾ ಕ್ರಮವಾಗಿ ನಾನು ಸ್ವಯಂ ಸಂಪರ್ಕತಡೆಯನ್ನು ಮಾಡಲಿದ್ದೇನೆ” ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುಶ್ಯಂತ್ ಸಿಂಗ್ ಅವರನ್ನು ಭೇಟಿಯಾದ್ದರು. ಈಗ ರಾಷ್ಟ್ರಪತಿಗಳು ತಮ್ಮ ಎಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ಕಳೆದ ಒಂದು ವಾರದಲ್ಲಿ ಕನಿಕಾ ಕಫೂರ್ ಭಾಗವಹಿಸಿದ ಸಾಮಾಜಿಕ ಕೂಟಗಳ ಬಗ್ಗೆ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ಕುರಿತು ಸರಕಾರದ ಆದೇಶದ ಹೊರತಾಗಿಯೂ ದೊಡ್ಡ ಸಭೆಗಳಲ್ಲಿ ಹಿರಿಯ ರಾಜಕಾರಣಿಗಳು ಈ ರೀತಿಯ ಭೋಜನಕೂಟವನ್ನು ನಡೆಸುವ ಅಗತ್ಯವೇನಿತ್ತು? ಸೆಲೆಬ್ರಿಟಿಗಳು ಸಹ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಕನಿಕಾ ಪ್ರಕರಣ ಉಳಿದ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...