Homeಮುಖಪುಟಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಹಣ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್’ ವಿಸ್ತೃತವಾಗಿ ವರದಿ ಮಾಡಿದೆ.

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾದರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್‌ ವರಿಷ್ಠಾಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರೂ. ವಸೂಲಿ ಮಾಡಿ ದೂರುದಾರ ಮಂಜುನಾಥ್‌ ಎಂಬವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ” ಎಂಬುದು ವರದಿಯಲ್ಲಿ ತಿಳಿದುಬಂದಿದೆ.

“ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆ ಇಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು ವಾರ್ಷಿಕ ವರದಿ ಸಿದ್ಧಪಡಿಸಿದೆ. ಈ ಬೆನ್ನಲ್ಲೇ ರವಿ ಡಿ.ಚನ್ನಣ್ಣನವರ್‌ ಸೇರಿ ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಮುಖ್ಯಕಾರ್ಯದರ್ಶಿಗೆ ನೀಡಿರುವ ದೂರು ಮುನ್ನಲೆಗೆ ಬಂದಿದೆ” ಎಂದು ದಿ ಫೈಲ್ ವರದಿ ಹೇಳಿದೆ.

2021ರ ಸೆಪ್ಟೆಂಬರ್‌ 28ರಂದು ಸಲ್ಲಿಕೆಯಾದ ದೂರಿನನ್ವಯ ಕ್ರಮ ಜರುಗಿಸಲು ಒಳಾಡಳಿತ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌  ಸೂಚಿಸಿದ್ದರು. ಹಣ ವರ್ಗಾವಣೆ ಸಂಬಂಧಿಸಿಂತೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಡೆಸಿರುವ ಸಂಭಾಷಣೆಯ ಆಡಿಯೊ ಕೂಡ ಇದೆ ಎಂದು ದೂರುದಾರರು ತಿಳಿಸಿದ್ದಾರೆ. ದೂರು ಸಲ್ಲಿಕೆಯಾಗಿ ಮೂರು ತಿಂಗಳಾದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

“ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸ್ಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನು ಮುಂದಿಡುತ್ತೇನೆ. ವಿಶೇಷ ತನಿಖಾ ತಂಡ ಅಥವಾ ಸಿಬಿಐ ಪ್ರಕರಣವನ್ನು ತನಿಖೆ ಮಾಡಬೇಕು” ಎಂದು ದೂರಿನಲ್ಲಿ ಮಂಜುನಾಥ್‌ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಣ ಬೇಡಿಕೆಯನ್ನು ಪೊಲೀಸ್ ಅಧಿಕಾರಿಗಳು ಇರಿಸಿದ್ದರು. ದುಡ್ಡು ವಸೂಲಿಯಾದ ಬಳಿಕ ಎಫ್‌ಆರ್‌ಐ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್ ಅಧಿಕಾರಿಗಳಿಗೆ ಹಣ ನೀಡಿದ್ದೇನೆ. ರವಿ ಡಿ.ಚೆನ್ನಣ್ಣನವರ್‌ಗೆ 25 ಲಕ್ಷ ರೂ., ಡಿವೈಎಸ್‌ಪಿಗೆ 15 ಲಕ್ಷ ರೂ., ಡಿವೈಎಸ್‌ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರೂ. ನೀಡಲಾಗಿದೆ ಎಂದು ಆರೋಪಿ ಅಶೋಕ್‌ ಎಂಬಾತ ಕಂದಪ್ಪ ಮತ್ತು ಸಂಪತ್‌ ಎಂಬವರ ಮುಂದೆ ಬಾಯ್ಬಿಟ್ಟಿದ್ದಾರೆ’ ಎಂದು ದೂರುದಾರ ಮಂಜುನಾಥ್ ಅವರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 5 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಹೀಗಾಗಿ ನಾಲ್ಕು ಲಕ್ಷ ರೂ.ಗಳನ್ನು ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಎಂಬವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬವರಿಗೆ ತಲುಪಿಸಲಾಗಿದೆ. ಹೀಗೆ ವಿವಿಧ ಅಧಿಕಾರಿಗಳಿಗೆ ಮುಂದೆಯೂ ನೀಡಲಾದ ಹಣದ ವಿವರಗಳನ್ನು ದೂರುದಾರರು ಹಂಚಿಕೊಂಡಿದ್ದಾರೆ.

ನಂತರದಲ್ಲಿ 12 ಆರೋಪಿಗಳ ಪೈಕಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇಷ್ಟೆಲ್ಲ ಆದ ಮೇಲೆ ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚೆನ್ನಣ್ಣ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ಮಂಜುನಾಥ್‌ ಅವರು ದೂರಿದ್ದಾರೆ. ವಂಚನೆ ಪ್ರಕರಣದ ವಿವರಗಳನ್ನು ದಿ ಫೈಲ್‌ ಮಾಡಿದೆ.


ಇದನ್ನೂ ಓದಿರಿ: ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೇಕೆದಾಟು ಯೋಜನೆ ವಿರುದ್ಧ ಎಲ್ಲರೂ ದ್ವನಿ ಎತ್ತಬೇಕು ಏಕೆಂದರೆ , ಅದರಿಂದ ಪರಿಸರ ನಾಶವಾಗುತ್ತೆ ಅನೇಕ ಪಕ್ಷಿಗಳು ಗುಂಪುಗೂಡುತ್ತವೆ ,ಅಲ್ಲಿ ಬಹುತೇಕವಾಗಿ ಹೆಚ್ಚು ಅನೆಗಳಿವೆ , ಎಲ್ಲಾ ಪ್ರಾಣಿ ಪಕ್ಷಿಗಳಿಗೆ ,ತೊಂದರೆ ಆಗುತ್ತದೆ ,
    ಕಾಡು ಹುಳಿಸಿ ನಾಡು ಬೆಳಸಿ
    ಜೈ ಕರ್ನಾಟಕ ಮಾತೆ…..

  2. ರವಿ ಡಿ. ಚನ್ನಣ್ಣನವರ್ ಬೆಂಗಳೂರು ಜಿಲ್ಲೆಯ ಎಸ್.ಪಿ. ಆಗಿದ್ದಾಗ ಅನೇಕ ರೌಡಿ ಶೀಟರ್ಗಳಿಂದ ಹಣ ಪಡೆದು, ಅವರನ್ನು ರೌಡಿ ಶೀಟಿನಿಂದ ತೆಗೆದಿದ್ದಾರೆ ಎಂಬ ಆರೋಪವೂ ಇದೆ.

  3. ನಾವೋ ಯಾರನ್ನು ಸೂಪರ್ ಪೊಲೀಸ್ ಅಧಿಕಾರಿಗಳು ಅಂತ ಹೇಳುತ್ತೇವೆ ಅವರೇ ನಿಜವಾದ ದರೋಡೆ ಕೊರಾರು .ಇದು ಕಟು ಸತ್ಯ.

  4. ನಿಜಾವಾಗಿ ಪೋಲಿಸ್ ರಲ್ಲಿ ಯಾರನ್ನು ಕೂಡ ನಂಬಬೇಡಿ ನೋಡುವುದಕ್ಕೇ ಮಾತ್ರಾ ಸಿಂಗಂ ತಾರ ಕಣಿಸುತ್ತಾರೆ
    ನನ್ನ ಪ್ರಾಕರ ನಮ್ಮ ರಾಜ್ಯದಲ್ಲಿ ಪೋಲಿಸ್ ರ ಅವಶ್ಯಕತೆ ಇಲ್ಲ ಮೇಡಮ್ ಯಾಕೆ ಅಂದ್ರೆ
    ಅವ್ರು ನಮ್ಮ ರಕ್ಷಣೆ ಮಾಡುತ್ತಿಲ್ಲ
    ನಮ್ಮನ್ನು ವಂಚನೆ ಮಾಡುತ್ತಾರೆ
    ಇವರಿಗೆ ಸಂಬಳ ಕೋಡುವುದಿಲ್ಲ ಅನ್ನೂವ
    ರೀತಿಯಲ್ಲಿ ನಾವು ಬೈಕ್ ನಲ್ಲಿ ಹೊಗುವಗ
    ನಮ್ಮ ಅತ್ತಿರಾ ಕೇವಲ 50₹ ರೂಪಯಿಗೆ ಸೂಲಿಗೆ ಮಾಡುತ್ತಾರೆ…….
    ಇದು ನನ್ನ ಅನುಭವದ ಮತ್ತು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...