Homeಮುಖಪುಟಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಹಣ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್’ ವಿಸ್ತೃತವಾಗಿ ವರದಿ ಮಾಡಿದೆ.

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾದರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್‌ ವರಿಷ್ಠಾಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರೂ. ವಸೂಲಿ ಮಾಡಿ ದೂರುದಾರ ಮಂಜುನಾಥ್‌ ಎಂಬವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ” ಎಂಬುದು ವರದಿಯಲ್ಲಿ ತಿಳಿದುಬಂದಿದೆ.

“ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆ ಇಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು ವಾರ್ಷಿಕ ವರದಿ ಸಿದ್ಧಪಡಿಸಿದೆ. ಈ ಬೆನ್ನಲ್ಲೇ ರವಿ ಡಿ.ಚನ್ನಣ್ಣನವರ್‌ ಸೇರಿ ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಮುಖ್ಯಕಾರ್ಯದರ್ಶಿಗೆ ನೀಡಿರುವ ದೂರು ಮುನ್ನಲೆಗೆ ಬಂದಿದೆ” ಎಂದು ದಿ ಫೈಲ್ ವರದಿ ಹೇಳಿದೆ.

2021ರ ಸೆಪ್ಟೆಂಬರ್‌ 28ರಂದು ಸಲ್ಲಿಕೆಯಾದ ದೂರಿನನ್ವಯ ಕ್ರಮ ಜರುಗಿಸಲು ಒಳಾಡಳಿತ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌  ಸೂಚಿಸಿದ್ದರು. ಹಣ ವರ್ಗಾವಣೆ ಸಂಬಂಧಿಸಿಂತೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಡೆಸಿರುವ ಸಂಭಾಷಣೆಯ ಆಡಿಯೊ ಕೂಡ ಇದೆ ಎಂದು ದೂರುದಾರರು ತಿಳಿಸಿದ್ದಾರೆ. ದೂರು ಸಲ್ಲಿಕೆಯಾಗಿ ಮೂರು ತಿಂಗಳಾದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

“ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸ್ಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನು ಮುಂದಿಡುತ್ತೇನೆ. ವಿಶೇಷ ತನಿಖಾ ತಂಡ ಅಥವಾ ಸಿಬಿಐ ಪ್ರಕರಣವನ್ನು ತನಿಖೆ ಮಾಡಬೇಕು” ಎಂದು ದೂರಿನಲ್ಲಿ ಮಂಜುನಾಥ್‌ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಣ ಬೇಡಿಕೆಯನ್ನು ಪೊಲೀಸ್ ಅಧಿಕಾರಿಗಳು ಇರಿಸಿದ್ದರು. ದುಡ್ಡು ವಸೂಲಿಯಾದ ಬಳಿಕ ಎಫ್‌ಆರ್‌ಐ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್ ಅಧಿಕಾರಿಗಳಿಗೆ ಹಣ ನೀಡಿದ್ದೇನೆ. ರವಿ ಡಿ.ಚೆನ್ನಣ್ಣನವರ್‌ಗೆ 25 ಲಕ್ಷ ರೂ., ಡಿವೈಎಸ್‌ಪಿಗೆ 15 ಲಕ್ಷ ರೂ., ಡಿವೈಎಸ್‌ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರೂ. ನೀಡಲಾಗಿದೆ ಎಂದು ಆರೋಪಿ ಅಶೋಕ್‌ ಎಂಬಾತ ಕಂದಪ್ಪ ಮತ್ತು ಸಂಪತ್‌ ಎಂಬವರ ಮುಂದೆ ಬಾಯ್ಬಿಟ್ಟಿದ್ದಾರೆ’ ಎಂದು ದೂರುದಾರ ಮಂಜುನಾಥ್ ಅವರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 5 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಹೀಗಾಗಿ ನಾಲ್ಕು ಲಕ್ಷ ರೂ.ಗಳನ್ನು ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಎಂಬವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬವರಿಗೆ ತಲುಪಿಸಲಾಗಿದೆ. ಹೀಗೆ ವಿವಿಧ ಅಧಿಕಾರಿಗಳಿಗೆ ಮುಂದೆಯೂ ನೀಡಲಾದ ಹಣದ ವಿವರಗಳನ್ನು ದೂರುದಾರರು ಹಂಚಿಕೊಂಡಿದ್ದಾರೆ.

ನಂತರದಲ್ಲಿ 12 ಆರೋಪಿಗಳ ಪೈಕಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇಷ್ಟೆಲ್ಲ ಆದ ಮೇಲೆ ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚೆನ್ನಣ್ಣ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ಮಂಜುನಾಥ್‌ ಅವರು ದೂರಿದ್ದಾರೆ. ವಂಚನೆ ಪ್ರಕರಣದ ವಿವರಗಳನ್ನು ದಿ ಫೈಲ್‌ ಮಾಡಿದೆ.


ಇದನ್ನೂ ಓದಿರಿ: ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೇಕೆದಾಟು ಯೋಜನೆ ವಿರುದ್ಧ ಎಲ್ಲರೂ ದ್ವನಿ ಎತ್ತಬೇಕು ಏಕೆಂದರೆ , ಅದರಿಂದ ಪರಿಸರ ನಾಶವಾಗುತ್ತೆ ಅನೇಕ ಪಕ್ಷಿಗಳು ಗುಂಪುಗೂಡುತ್ತವೆ ,ಅಲ್ಲಿ ಬಹುತೇಕವಾಗಿ ಹೆಚ್ಚು ಅನೆಗಳಿವೆ , ಎಲ್ಲಾ ಪ್ರಾಣಿ ಪಕ್ಷಿಗಳಿಗೆ ,ತೊಂದರೆ ಆಗುತ್ತದೆ ,
    ಕಾಡು ಹುಳಿಸಿ ನಾಡು ಬೆಳಸಿ
    ಜೈ ಕರ್ನಾಟಕ ಮಾತೆ…..

  2. ರವಿ ಡಿ. ಚನ್ನಣ್ಣನವರ್ ಬೆಂಗಳೂರು ಜಿಲ್ಲೆಯ ಎಸ್.ಪಿ. ಆಗಿದ್ದಾಗ ಅನೇಕ ರೌಡಿ ಶೀಟರ್ಗಳಿಂದ ಹಣ ಪಡೆದು, ಅವರನ್ನು ರೌಡಿ ಶೀಟಿನಿಂದ ತೆಗೆದಿದ್ದಾರೆ ಎಂಬ ಆರೋಪವೂ ಇದೆ.

  3. ನಾವೋ ಯಾರನ್ನು ಸೂಪರ್ ಪೊಲೀಸ್ ಅಧಿಕಾರಿಗಳು ಅಂತ ಹೇಳುತ್ತೇವೆ ಅವರೇ ನಿಜವಾದ ದರೋಡೆ ಕೊರಾರು .ಇದು ಕಟು ಸತ್ಯ.

  4. ನಿಜಾವಾಗಿ ಪೋಲಿಸ್ ರಲ್ಲಿ ಯಾರನ್ನು ಕೂಡ ನಂಬಬೇಡಿ ನೋಡುವುದಕ್ಕೇ ಮಾತ್ರಾ ಸಿಂಗಂ ತಾರ ಕಣಿಸುತ್ತಾರೆ
    ನನ್ನ ಪ್ರಾಕರ ನಮ್ಮ ರಾಜ್ಯದಲ್ಲಿ ಪೋಲಿಸ್ ರ ಅವಶ್ಯಕತೆ ಇಲ್ಲ ಮೇಡಮ್ ಯಾಕೆ ಅಂದ್ರೆ
    ಅವ್ರು ನಮ್ಮ ರಕ್ಷಣೆ ಮಾಡುತ್ತಿಲ್ಲ
    ನಮ್ಮನ್ನು ವಂಚನೆ ಮಾಡುತ್ತಾರೆ
    ಇವರಿಗೆ ಸಂಬಳ ಕೋಡುವುದಿಲ್ಲ ಅನ್ನೂವ
    ರೀತಿಯಲ್ಲಿ ನಾವು ಬೈಕ್ ನಲ್ಲಿ ಹೊಗುವಗ
    ನಮ್ಮ ಅತ್ತಿರಾ ಕೇವಲ 50₹ ರೂಪಯಿಗೆ ಸೂಲಿಗೆ ಮಾಡುತ್ತಾರೆ…….
    ಇದು ನನ್ನ ಅನುಭವದ ಮತ್ತು

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....