Homeಮುಖಪುಟಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಹಣ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್’ ವಿಸ್ತೃತವಾಗಿ ವರದಿ ಮಾಡಿದೆ.

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾದರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್‌ ವರಿಷ್ಠಾಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರೂ. ವಸೂಲಿ ಮಾಡಿ ದೂರುದಾರ ಮಂಜುನಾಥ್‌ ಎಂಬವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ” ಎಂಬುದು ವರದಿಯಲ್ಲಿ ತಿಳಿದುಬಂದಿದೆ.

“ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆ ಇಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು ವಾರ್ಷಿಕ ವರದಿ ಸಿದ್ಧಪಡಿಸಿದೆ. ಈ ಬೆನ್ನಲ್ಲೇ ರವಿ ಡಿ.ಚನ್ನಣ್ಣನವರ್‌ ಸೇರಿ ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಮುಖ್ಯಕಾರ್ಯದರ್ಶಿಗೆ ನೀಡಿರುವ ದೂರು ಮುನ್ನಲೆಗೆ ಬಂದಿದೆ” ಎಂದು ದಿ ಫೈಲ್ ವರದಿ ಹೇಳಿದೆ.

2021ರ ಸೆಪ್ಟೆಂಬರ್‌ 28ರಂದು ಸಲ್ಲಿಕೆಯಾದ ದೂರಿನನ್ವಯ ಕ್ರಮ ಜರುಗಿಸಲು ಒಳಾಡಳಿತ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌  ಸೂಚಿಸಿದ್ದರು. ಹಣ ವರ್ಗಾವಣೆ ಸಂಬಂಧಿಸಿಂತೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಡೆಸಿರುವ ಸಂಭಾಷಣೆಯ ಆಡಿಯೊ ಕೂಡ ಇದೆ ಎಂದು ದೂರುದಾರರು ತಿಳಿಸಿದ್ದಾರೆ. ದೂರು ಸಲ್ಲಿಕೆಯಾಗಿ ಮೂರು ತಿಂಗಳಾದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

“ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸ್ಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನು ಮುಂದಿಡುತ್ತೇನೆ. ವಿಶೇಷ ತನಿಖಾ ತಂಡ ಅಥವಾ ಸಿಬಿಐ ಪ್ರಕರಣವನ್ನು ತನಿಖೆ ಮಾಡಬೇಕು” ಎಂದು ದೂರಿನಲ್ಲಿ ಮಂಜುನಾಥ್‌ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಣ ಬೇಡಿಕೆಯನ್ನು ಪೊಲೀಸ್ ಅಧಿಕಾರಿಗಳು ಇರಿಸಿದ್ದರು. ದುಡ್ಡು ವಸೂಲಿಯಾದ ಬಳಿಕ ಎಫ್‌ಆರ್‌ಐ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್ ಅಧಿಕಾರಿಗಳಿಗೆ ಹಣ ನೀಡಿದ್ದೇನೆ. ರವಿ ಡಿ.ಚೆನ್ನಣ್ಣನವರ್‌ಗೆ 25 ಲಕ್ಷ ರೂ., ಡಿವೈಎಸ್‌ಪಿಗೆ 15 ಲಕ್ಷ ರೂ., ಡಿವೈಎಸ್‌ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರೂ. ನೀಡಲಾಗಿದೆ ಎಂದು ಆರೋಪಿ ಅಶೋಕ್‌ ಎಂಬಾತ ಕಂದಪ್ಪ ಮತ್ತು ಸಂಪತ್‌ ಎಂಬವರ ಮುಂದೆ ಬಾಯ್ಬಿಟ್ಟಿದ್ದಾರೆ’ ಎಂದು ದೂರುದಾರ ಮಂಜುನಾಥ್ ಅವರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 5 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಹೀಗಾಗಿ ನಾಲ್ಕು ಲಕ್ಷ ರೂ.ಗಳನ್ನು ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಎಂಬವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬವರಿಗೆ ತಲುಪಿಸಲಾಗಿದೆ. ಹೀಗೆ ವಿವಿಧ ಅಧಿಕಾರಿಗಳಿಗೆ ಮುಂದೆಯೂ ನೀಡಲಾದ ಹಣದ ವಿವರಗಳನ್ನು ದೂರುದಾರರು ಹಂಚಿಕೊಂಡಿದ್ದಾರೆ.

ನಂತರದಲ್ಲಿ 12 ಆರೋಪಿಗಳ ಪೈಕಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇಷ್ಟೆಲ್ಲ ಆದ ಮೇಲೆ ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚೆನ್ನಣ್ಣ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ಮಂಜುನಾಥ್‌ ಅವರು ದೂರಿದ್ದಾರೆ. ವಂಚನೆ ಪ್ರಕರಣದ ವಿವರಗಳನ್ನು ದಿ ಫೈಲ್‌ ಮಾಡಿದೆ.


ಇದನ್ನೂ ಓದಿರಿ: ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೇಕೆದಾಟು ಯೋಜನೆ ವಿರುದ್ಧ ಎಲ್ಲರೂ ದ್ವನಿ ಎತ್ತಬೇಕು ಏಕೆಂದರೆ , ಅದರಿಂದ ಪರಿಸರ ನಾಶವಾಗುತ್ತೆ ಅನೇಕ ಪಕ್ಷಿಗಳು ಗುಂಪುಗೂಡುತ್ತವೆ ,ಅಲ್ಲಿ ಬಹುತೇಕವಾಗಿ ಹೆಚ್ಚು ಅನೆಗಳಿವೆ , ಎಲ್ಲಾ ಪ್ರಾಣಿ ಪಕ್ಷಿಗಳಿಗೆ ,ತೊಂದರೆ ಆಗುತ್ತದೆ ,
    ಕಾಡು ಹುಳಿಸಿ ನಾಡು ಬೆಳಸಿ
    ಜೈ ಕರ್ನಾಟಕ ಮಾತೆ…..

  2. ರವಿ ಡಿ. ಚನ್ನಣ್ಣನವರ್ ಬೆಂಗಳೂರು ಜಿಲ್ಲೆಯ ಎಸ್.ಪಿ. ಆಗಿದ್ದಾಗ ಅನೇಕ ರೌಡಿ ಶೀಟರ್ಗಳಿಂದ ಹಣ ಪಡೆದು, ಅವರನ್ನು ರೌಡಿ ಶೀಟಿನಿಂದ ತೆಗೆದಿದ್ದಾರೆ ಎಂಬ ಆರೋಪವೂ ಇದೆ.

  3. ನಾವೋ ಯಾರನ್ನು ಸೂಪರ್ ಪೊಲೀಸ್ ಅಧಿಕಾರಿಗಳು ಅಂತ ಹೇಳುತ್ತೇವೆ ಅವರೇ ನಿಜವಾದ ದರೋಡೆ ಕೊರಾರು .ಇದು ಕಟು ಸತ್ಯ.

  4. ನಿಜಾವಾಗಿ ಪೋಲಿಸ್ ರಲ್ಲಿ ಯಾರನ್ನು ಕೂಡ ನಂಬಬೇಡಿ ನೋಡುವುದಕ್ಕೇ ಮಾತ್ರಾ ಸಿಂಗಂ ತಾರ ಕಣಿಸುತ್ತಾರೆ
    ನನ್ನ ಪ್ರಾಕರ ನಮ್ಮ ರಾಜ್ಯದಲ್ಲಿ ಪೋಲಿಸ್ ರ ಅವಶ್ಯಕತೆ ಇಲ್ಲ ಮೇಡಮ್ ಯಾಕೆ ಅಂದ್ರೆ
    ಅವ್ರು ನಮ್ಮ ರಕ್ಷಣೆ ಮಾಡುತ್ತಿಲ್ಲ
    ನಮ್ಮನ್ನು ವಂಚನೆ ಮಾಡುತ್ತಾರೆ
    ಇವರಿಗೆ ಸಂಬಳ ಕೋಡುವುದಿಲ್ಲ ಅನ್ನೂವ
    ರೀತಿಯಲ್ಲಿ ನಾವು ಬೈಕ್ ನಲ್ಲಿ ಹೊಗುವಗ
    ನಮ್ಮ ಅತ್ತಿರಾ ಕೇವಲ 50₹ ರೂಪಯಿಗೆ ಸೂಲಿಗೆ ಮಾಡುತ್ತಾರೆ…….
    ಇದು ನನ್ನ ಅನುಭವದ ಮತ್ತು

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...