Homeಮುಖಪುಟಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಹಣ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್’ ವಿಸ್ತೃತವಾಗಿ ವರದಿ ಮಾಡಿದೆ.

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾದರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್‌ ವರಿಷ್ಠಾಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರೂ. ವಸೂಲಿ ಮಾಡಿ ದೂರುದಾರ ಮಂಜುನಾಥ್‌ ಎಂಬವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ” ಎಂಬುದು ವರದಿಯಲ್ಲಿ ತಿಳಿದುಬಂದಿದೆ.

“ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆ ಇಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು ವಾರ್ಷಿಕ ವರದಿ ಸಿದ್ಧಪಡಿಸಿದೆ. ಈ ಬೆನ್ನಲ್ಲೇ ರವಿ ಡಿ.ಚನ್ನಣ್ಣನವರ್‌ ಸೇರಿ ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಮುಖ್ಯಕಾರ್ಯದರ್ಶಿಗೆ ನೀಡಿರುವ ದೂರು ಮುನ್ನಲೆಗೆ ಬಂದಿದೆ” ಎಂದು ದಿ ಫೈಲ್ ವರದಿ ಹೇಳಿದೆ.

2021ರ ಸೆಪ್ಟೆಂಬರ್‌ 28ರಂದು ಸಲ್ಲಿಕೆಯಾದ ದೂರಿನನ್ವಯ ಕ್ರಮ ಜರುಗಿಸಲು ಒಳಾಡಳಿತ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌  ಸೂಚಿಸಿದ್ದರು. ಹಣ ವರ್ಗಾವಣೆ ಸಂಬಂಧಿಸಿಂತೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಡೆಸಿರುವ ಸಂಭಾಷಣೆಯ ಆಡಿಯೊ ಕೂಡ ಇದೆ ಎಂದು ದೂರುದಾರರು ತಿಳಿಸಿದ್ದಾರೆ. ದೂರು ಸಲ್ಲಿಕೆಯಾಗಿ ಮೂರು ತಿಂಗಳಾದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

“ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸ್ಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನು ಮುಂದಿಡುತ್ತೇನೆ. ವಿಶೇಷ ತನಿಖಾ ತಂಡ ಅಥವಾ ಸಿಬಿಐ ಪ್ರಕರಣವನ್ನು ತನಿಖೆ ಮಾಡಬೇಕು” ಎಂದು ದೂರಿನಲ್ಲಿ ಮಂಜುನಾಥ್‌ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಣ ಬೇಡಿಕೆಯನ್ನು ಪೊಲೀಸ್ ಅಧಿಕಾರಿಗಳು ಇರಿಸಿದ್ದರು. ದುಡ್ಡು ವಸೂಲಿಯಾದ ಬಳಿಕ ಎಫ್‌ಆರ್‌ಐ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್ ಅಧಿಕಾರಿಗಳಿಗೆ ಹಣ ನೀಡಿದ್ದೇನೆ. ರವಿ ಡಿ.ಚೆನ್ನಣ್ಣನವರ್‌ಗೆ 25 ಲಕ್ಷ ರೂ., ಡಿವೈಎಸ್‌ಪಿಗೆ 15 ಲಕ್ಷ ರೂ., ಡಿವೈಎಸ್‌ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರೂ. ನೀಡಲಾಗಿದೆ ಎಂದು ಆರೋಪಿ ಅಶೋಕ್‌ ಎಂಬಾತ ಕಂದಪ್ಪ ಮತ್ತು ಸಂಪತ್‌ ಎಂಬವರ ಮುಂದೆ ಬಾಯ್ಬಿಟ್ಟಿದ್ದಾರೆ’ ಎಂದು ದೂರುದಾರ ಮಂಜುನಾಥ್ ಅವರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 5 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಹೀಗಾಗಿ ನಾಲ್ಕು ಲಕ್ಷ ರೂ.ಗಳನ್ನು ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಎಂಬವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬವರಿಗೆ ತಲುಪಿಸಲಾಗಿದೆ. ಹೀಗೆ ವಿವಿಧ ಅಧಿಕಾರಿಗಳಿಗೆ ಮುಂದೆಯೂ ನೀಡಲಾದ ಹಣದ ವಿವರಗಳನ್ನು ದೂರುದಾರರು ಹಂಚಿಕೊಂಡಿದ್ದಾರೆ.

ನಂತರದಲ್ಲಿ 12 ಆರೋಪಿಗಳ ಪೈಕಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇಷ್ಟೆಲ್ಲ ಆದ ಮೇಲೆ ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚೆನ್ನಣ್ಣ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ಮಂಜುನಾಥ್‌ ಅವರು ದೂರಿದ್ದಾರೆ. ವಂಚನೆ ಪ್ರಕರಣದ ವಿವರಗಳನ್ನು ದಿ ಫೈಲ್‌ ಮಾಡಿದೆ.


ಇದನ್ನೂ ಓದಿರಿ: ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೇಕೆದಾಟು ಯೋಜನೆ ವಿರುದ್ಧ ಎಲ್ಲರೂ ದ್ವನಿ ಎತ್ತಬೇಕು ಏಕೆಂದರೆ , ಅದರಿಂದ ಪರಿಸರ ನಾಶವಾಗುತ್ತೆ ಅನೇಕ ಪಕ್ಷಿಗಳು ಗುಂಪುಗೂಡುತ್ತವೆ ,ಅಲ್ಲಿ ಬಹುತೇಕವಾಗಿ ಹೆಚ್ಚು ಅನೆಗಳಿವೆ , ಎಲ್ಲಾ ಪ್ರಾಣಿ ಪಕ್ಷಿಗಳಿಗೆ ,ತೊಂದರೆ ಆಗುತ್ತದೆ ,
    ಕಾಡು ಹುಳಿಸಿ ನಾಡು ಬೆಳಸಿ
    ಜೈ ಕರ್ನಾಟಕ ಮಾತೆ…..

  2. ರವಿ ಡಿ. ಚನ್ನಣ್ಣನವರ್ ಬೆಂಗಳೂರು ಜಿಲ್ಲೆಯ ಎಸ್.ಪಿ. ಆಗಿದ್ದಾಗ ಅನೇಕ ರೌಡಿ ಶೀಟರ್ಗಳಿಂದ ಹಣ ಪಡೆದು, ಅವರನ್ನು ರೌಡಿ ಶೀಟಿನಿಂದ ತೆಗೆದಿದ್ದಾರೆ ಎಂಬ ಆರೋಪವೂ ಇದೆ.

  3. ನಾವೋ ಯಾರನ್ನು ಸೂಪರ್ ಪೊಲೀಸ್ ಅಧಿಕಾರಿಗಳು ಅಂತ ಹೇಳುತ್ತೇವೆ ಅವರೇ ನಿಜವಾದ ದರೋಡೆ ಕೊರಾರು .ಇದು ಕಟು ಸತ್ಯ.

  4. ನಿಜಾವಾಗಿ ಪೋಲಿಸ್ ರಲ್ಲಿ ಯಾರನ್ನು ಕೂಡ ನಂಬಬೇಡಿ ನೋಡುವುದಕ್ಕೇ ಮಾತ್ರಾ ಸಿಂಗಂ ತಾರ ಕಣಿಸುತ್ತಾರೆ
    ನನ್ನ ಪ್ರಾಕರ ನಮ್ಮ ರಾಜ್ಯದಲ್ಲಿ ಪೋಲಿಸ್ ರ ಅವಶ್ಯಕತೆ ಇಲ್ಲ ಮೇಡಮ್ ಯಾಕೆ ಅಂದ್ರೆ
    ಅವ್ರು ನಮ್ಮ ರಕ್ಷಣೆ ಮಾಡುತ್ತಿಲ್ಲ
    ನಮ್ಮನ್ನು ವಂಚನೆ ಮಾಡುತ್ತಾರೆ
    ಇವರಿಗೆ ಸಂಬಳ ಕೋಡುವುದಿಲ್ಲ ಅನ್ನೂವ
    ರೀತಿಯಲ್ಲಿ ನಾವು ಬೈಕ್ ನಲ್ಲಿ ಹೊಗುವಗ
    ನಮ್ಮ ಅತ್ತಿರಾ ಕೇವಲ 50₹ ರೂಪಯಿಗೆ ಸೂಲಿಗೆ ಮಾಡುತ್ತಾರೆ…….
    ಇದು ನನ್ನ ಅನುಭವದ ಮತ್ತು

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...