Homeಮುಖಪುಟಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಹಣ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್’ ವಿಸ್ತೃತವಾಗಿ ವರದಿ ಮಾಡಿದೆ.

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾದರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್‌ ವರಿಷ್ಠಾಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರೂ. ವಸೂಲಿ ಮಾಡಿ ದೂರುದಾರ ಮಂಜುನಾಥ್‌ ಎಂಬವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ” ಎಂಬುದು ವರದಿಯಲ್ಲಿ ತಿಳಿದುಬಂದಿದೆ.

“ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆ ಇಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು ವಾರ್ಷಿಕ ವರದಿ ಸಿದ್ಧಪಡಿಸಿದೆ. ಈ ಬೆನ್ನಲ್ಲೇ ರವಿ ಡಿ.ಚನ್ನಣ್ಣನವರ್‌ ಸೇರಿ ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಮುಖ್ಯಕಾರ್ಯದರ್ಶಿಗೆ ನೀಡಿರುವ ದೂರು ಮುನ್ನಲೆಗೆ ಬಂದಿದೆ” ಎಂದು ದಿ ಫೈಲ್ ವರದಿ ಹೇಳಿದೆ.

2021ರ ಸೆಪ್ಟೆಂಬರ್‌ 28ರಂದು ಸಲ್ಲಿಕೆಯಾದ ದೂರಿನನ್ವಯ ಕ್ರಮ ಜರುಗಿಸಲು ಒಳಾಡಳಿತ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌  ಸೂಚಿಸಿದ್ದರು. ಹಣ ವರ್ಗಾವಣೆ ಸಂಬಂಧಿಸಿಂತೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಡೆಸಿರುವ ಸಂಭಾಷಣೆಯ ಆಡಿಯೊ ಕೂಡ ಇದೆ ಎಂದು ದೂರುದಾರರು ತಿಳಿಸಿದ್ದಾರೆ. ದೂರು ಸಲ್ಲಿಕೆಯಾಗಿ ಮೂರು ತಿಂಗಳಾದರೂ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

“ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸ್ಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನು ಮುಂದಿಡುತ್ತೇನೆ. ವಿಶೇಷ ತನಿಖಾ ತಂಡ ಅಥವಾ ಸಿಬಿಐ ಪ್ರಕರಣವನ್ನು ತನಿಖೆ ಮಾಡಬೇಕು” ಎಂದು ದೂರಿನಲ್ಲಿ ಮಂಜುನಾಥ್‌ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಣ ಬೇಡಿಕೆಯನ್ನು ಪೊಲೀಸ್ ಅಧಿಕಾರಿಗಳು ಇರಿಸಿದ್ದರು. ದುಡ್ಡು ವಸೂಲಿಯಾದ ಬಳಿಕ ಎಫ್‌ಆರ್‌ಐ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ನನ್ನ ಮನೆ ಬ್ಯಾಂಕ್‌ನಿಂದ ಹರಾಜಿಗೆ ಬಂದಿದ್ದರೂ ಪೊಲೀಸ್ ಅಧಿಕಾರಿಗಳಿಗೆ ಹಣ ನೀಡಿದ್ದೇನೆ. ರವಿ ಡಿ.ಚೆನ್ನಣ್ಣನವರ್‌ಗೆ 25 ಲಕ್ಷ ರೂ., ಡಿವೈಎಸ್‌ಪಿಗೆ 15 ಲಕ್ಷ ರೂ., ಡಿವೈಎಸ್‌ಪಿ ಕಚೇರಿಯ ಮತ್ತೊಬ್ಬ ಅಧಿಕಾರಿಗೆ 10 ಲಕ್ಷ ರೂ. ನೀಡಲಾಗಿದೆ ಎಂದು ಆರೋಪಿ ಅಶೋಕ್‌ ಎಂಬಾತ ಕಂದಪ್ಪ ಮತ್ತು ಸಂಪತ್‌ ಎಂಬವರ ಮುಂದೆ ಬಾಯ್ಬಿಟ್ಟಿದ್ದಾರೆ’ ಎಂದು ದೂರುದಾರ ಮಂಜುನಾಥ್ ಅವರು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 5 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಹೀಗಾಗಿ ನಾಲ್ಕು ಲಕ್ಷ ರೂ.ಗಳನ್ನು ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಎಂಬವರ ಸೂಚನೆ ಮೇರೆಗೆ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಶುಭಾ/ಅನಿತಾ ಎಂಬವರಿಗೆ ತಲುಪಿಸಲಾಗಿದೆ. ಹೀಗೆ ವಿವಿಧ ಅಧಿಕಾರಿಗಳಿಗೆ ಮುಂದೆಯೂ ನೀಡಲಾದ ಹಣದ ವಿವರಗಳನ್ನು ದೂರುದಾರರು ಹಂಚಿಕೊಂಡಿದ್ದಾರೆ.

ನಂತರದಲ್ಲಿ 12 ಆರೋಪಿಗಳ ಪೈಕಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇಷ್ಟೆಲ್ಲ ಆದ ಮೇಲೆ ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚೆನ್ನಣ್ಣ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ಮಂಜುನಾಥ್‌ ಅವರು ದೂರಿದ್ದಾರೆ. ವಂಚನೆ ಪ್ರಕರಣದ ವಿವರಗಳನ್ನು ದಿ ಫೈಲ್‌ ಮಾಡಿದೆ.


ಇದನ್ನೂ ಓದಿರಿ: ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಮೇಕೆದಾಟು ಯೋಜನೆ ವಿರುದ್ಧ ಎಲ್ಲರೂ ದ್ವನಿ ಎತ್ತಬೇಕು ಏಕೆಂದರೆ , ಅದರಿಂದ ಪರಿಸರ ನಾಶವಾಗುತ್ತೆ ಅನೇಕ ಪಕ್ಷಿಗಳು ಗುಂಪುಗೂಡುತ್ತವೆ ,ಅಲ್ಲಿ ಬಹುತೇಕವಾಗಿ ಹೆಚ್ಚು ಅನೆಗಳಿವೆ , ಎಲ್ಲಾ ಪ್ರಾಣಿ ಪಕ್ಷಿಗಳಿಗೆ ,ತೊಂದರೆ ಆಗುತ್ತದೆ ,
    ಕಾಡು ಹುಳಿಸಿ ನಾಡು ಬೆಳಸಿ
    ಜೈ ಕರ್ನಾಟಕ ಮಾತೆ…..

  2. ರವಿ ಡಿ. ಚನ್ನಣ್ಣನವರ್ ಬೆಂಗಳೂರು ಜಿಲ್ಲೆಯ ಎಸ್.ಪಿ. ಆಗಿದ್ದಾಗ ಅನೇಕ ರೌಡಿ ಶೀಟರ್ಗಳಿಂದ ಹಣ ಪಡೆದು, ಅವರನ್ನು ರೌಡಿ ಶೀಟಿನಿಂದ ತೆಗೆದಿದ್ದಾರೆ ಎಂಬ ಆರೋಪವೂ ಇದೆ.

  3. ನಾವೋ ಯಾರನ್ನು ಸೂಪರ್ ಪೊಲೀಸ್ ಅಧಿಕಾರಿಗಳು ಅಂತ ಹೇಳುತ್ತೇವೆ ಅವರೇ ನಿಜವಾದ ದರೋಡೆ ಕೊರಾರು .ಇದು ಕಟು ಸತ್ಯ.

  4. ನಿಜಾವಾಗಿ ಪೋಲಿಸ್ ರಲ್ಲಿ ಯಾರನ್ನು ಕೂಡ ನಂಬಬೇಡಿ ನೋಡುವುದಕ್ಕೇ ಮಾತ್ರಾ ಸಿಂಗಂ ತಾರ ಕಣಿಸುತ್ತಾರೆ
    ನನ್ನ ಪ್ರಾಕರ ನಮ್ಮ ರಾಜ್ಯದಲ್ಲಿ ಪೋಲಿಸ್ ರ ಅವಶ್ಯಕತೆ ಇಲ್ಲ ಮೇಡಮ್ ಯಾಕೆ ಅಂದ್ರೆ
    ಅವ್ರು ನಮ್ಮ ರಕ್ಷಣೆ ಮಾಡುತ್ತಿಲ್ಲ
    ನಮ್ಮನ್ನು ವಂಚನೆ ಮಾಡುತ್ತಾರೆ
    ಇವರಿಗೆ ಸಂಬಳ ಕೋಡುವುದಿಲ್ಲ ಅನ್ನೂವ
    ರೀತಿಯಲ್ಲಿ ನಾವು ಬೈಕ್ ನಲ್ಲಿ ಹೊಗುವಗ
    ನಮ್ಮ ಅತ್ತಿರಾ ಕೇವಲ 50₹ ರೂಪಯಿಗೆ ಸೂಲಿಗೆ ಮಾಡುತ್ತಾರೆ…….
    ಇದು ನನ್ನ ಅನುಭವದ ಮತ್ತು

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...