Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...