Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...