Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...