Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...