Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...