Homeಕರ್ನಾಟಕಸಿಎಸ್‌ ಶಾಲಿನಿ ರಜನೀಶ್ ಕುರಿತು ಮಾನಹಾನಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು

ಸಿಎಸ್‌ ಶಾಲಿನಿ ರಜನೀಶ್ ಕುರಿತು ಮಾನಹಾನಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು

- Advertisement -
- Advertisement -

ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಜುಲೈ 1ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಇತರ ಪ್ರಮುಖರು ಉಪ ಪೊಲೀಸ್​ ಆಯುಕ್ತ (ವಿಧಾನಸೌಧ ಭದ್ರತೆ) ಎಂ. ಎನ್​ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿದ್ದರು. ಆಗ ಪರಿಷತ್​ ವಿಪಕ್ಷ ಮುಖ್ಯ ಸಚೇತಕರೂ ಆಗಿರುವ ಎನ್.​ ರವಿಕುಮಾರ್ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಮನೋಹರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ರವಿಕುಮಾರ್ ಬಳಸಿರುವ ಪದಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇವೆ. ಈ ಹಿಂದೆ ಸಿ.ಟಿ ರವಿ ಸದನದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ತಿಂಗಳ ಹಿಂದೆ ರವಿ ಕುಮಾರ್ ಕಲಬುರಗಿ ಡಿಸಿ ವಿರುದ್ದ ಹೇಳಿಕೆ ಕೊಟ್ಟು ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದ್ದರು ಎಂದಿದ್ದಾರೆ.

ಇವರ ಈ ವರ್ತನೆಗಳು ಬಿಜೆಪಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಬಿಜೆಪಿಗೆ ಏನಾದರು ನೈತಿಕತೆ ಇದ್ದರೆ ರವಿಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮನೋಹರ್ ಆಗ್ರಹಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರು, ಮಹಿಳಾ ಆಯೋಗಕ್ಕೆ ಪತ್ರ

ಶಾಲಿನಿ ರಜನೀಶ್ ಕುರಿತು ಮಾನಹಾನಿಕರ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮೈಸೂರಿನ ಒಡನಾಡಿ ಸಂಸ್ಥೆಯ ಪರಶುರಾಮ್ ಎಂ.ಎಲ್‌ ಮತ್ತು ಸ್ಟ್ಲ್ಯಾನ್ಲಿ ಕೆ.ವಿ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಹೀಗಿದೆ

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು “ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ಬಿಜೆಪಿಯ ಎನ್.ರವಿಕುಮಾರ್‌ ಅವರು ನೀಡಿರುವ ನೀಡಿರುವ ದ್ವಂದ್ವ ಹೇಳಿಕೆ ಆಶ್ಚರ್ಯಕರ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತಾವು ದಯಮಾಡಿ ಈ ನಿಟ್ಟಿನಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೋರುತ್ತಿದ್ದೇವೆ. ಇವರ ಹೇಳಿಕೆಯು ರಾಜ್ಯದಲ್ಲಿ ಉದ್ಯೋಗ ಮಾಡುತ್ತಿರುವ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗುತ್ತದೆ. ತಾವು ದಯಮಾಡಿ ಈ ವಿಚಾರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎನ್. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.”

“ಮುಖ್ಯವಾಗಿ ಸಾಮಾಜಿಕ ಹೋರಾಟದ ಮುಂಚೂಣಿಯಲ್ಲಿರುವ ಒಡನಾಡಿ ಸಂಸ್ಥೆಯು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ 35 ವರ್ಷಗಳಿಂದ ಮಹಿಳೆಯರ ಸಶಕ್ತತೆ ಹಾಗೂ ಅವರ ಘನತೆಯುಕ್ತ ಜೀವನ ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದೆ. ಇವರ ಹೇಳಿಕೆಯು ಮಹಿಳೆಯರ ಘನತೆಯನ್ನು ಕುಗ್ಗಿಸುವಂತಲ್ಲದೇ ಆತಂಕವನ್ನು ಸೃಷ್ಟಿಸುವಂತಾಗಿದೆ. ತಾವು ದಯಮಾಡಿ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿ. ಇದರೊಟ್ಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಲಿಂಕ್ ಅನ್ನು ಲಗತ್ತಿಸಲಾಗಿದೆ. https://www.facebook.com/share/p/1ZiquTtRut/.”

“ಪತ್ರದ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಉಚ್ಚ ನ್ಯಾಯಾಲಯ, ಕರ್ನಾಟಕ ಇವರಿಗೂ ಕಳಿಸಲಾಗಿದೆ.”

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...