Homeಕರ್ನಾಟಕಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗ ಆರೋಪ: ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು

ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗ ಆರೋಪ: ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ದಾಖಲಿಸಿದ್ದಾರೆ.

ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಚುನಾವಣಾ ಬಾಂಡ್‌ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್‌, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ, ಡಾ ಅಂಬೇಡ್ಕರ್‌ ದಂಡು, ಫ್ಯೂಚರ್‌ ಇಂಡಿಯಾ ಆರ್ಗನೈಸೇಷನ್‌ ಜಂಟಿಯಾಗಿ ದೂರು ನೀಡಿವೆ.

“ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೂಲಕವೇ ಈ ಪಿತೂರಿ ನಡೆದಿದೆ. ಒಟ್ಟು 477 ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಅದರಲ್ಲಿ 20 ಪ್ರಕರಣಗಳಲ್ಲಿ ಐಟಿ, ಇಡಿ ದಾಳಿಯಾದ ನಂತರ ಚುನಾವಣಾ ಬಾಂಡ್‌ ಖರೀದಿಸಲಾಗಿದೆ. ಆ ಹಣ ಬಿಜೆಪಿಯ ಖಾತೆಗೆ ಸಂದಾಯವಾಗಿದೆ. ಇದು ಐಪಿಸಿ ಸೆಕ್ಷನ್ 384/ 120ಬಿ ಅಡಿ ಕ್ರಿಮಿನಲ್‌ ಅಪರಾಧವಾಗಿದೆ” ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ್‌ ಐಯ್ಯರ್‌ ಹೇಳಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ಮಾಹಿತಿ ನೀಡಿರುವ ಆದರ್ಶ್ ಅಯ್ಯರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ (ಇಡಿ), ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಸಮಿತಿಯ ಕಾರ್ಯಕಾರಿಣಿ ಸದಸ್ಯರು, ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಾಲಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಸದಸ್ಯರ ವಿರುದ್ದ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ, “ಇದೊಂದು ಹೈ ಪ್ರೊಫೈಲ್‌ ಪ್ರಕರಣ ಎಂದ ತಿಲಕನಗರ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದಾರೆ. ನಂತರ ದೂರು ಸ್ವೀಕರಿಸಿದ್ದಾರೆ. ಚುನಾವಣೆಯ ಸಮಯ ಆಗಿರುವ ಕಾರಣ ಎಆರ್‌ಒ (Assistant Review Officer)ಗೆ ವರ್ಗಾಯಿಸುತ್ತೇವೆ ಎಂದಿದ್ದಾರೆ.

“ಸೋಮವಾರ ನಾವು ಡಿಸಿಪಿಯವರಿಗೆ ಮತ್ತೊಂದು ದೂರು ಕೊಡುತ್ತೇವೆ. ಎಫ್‌ಐಆರ್‌ ದಾಖಲಿಸದಿದ್ದರೆ ಕೋರ್ಟ್‌ ಮೊರೆ ಹೋಗುತ್ತೇವೆ” ಎಂದು ಆದರ್ಶ್‌ ಅಯ್ಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...