Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...