Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...