Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...