Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...