Homeಮುಖಪುಟಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

- Advertisement -
- Advertisement -

ಬಲಂಪಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಕೇರಳದ ಜನಪ್ರಿಯ ದಲಿತ ರ‍್ಯಾಪರ್ ‘ವೇಡನ್’ (ಹಿರಂದಾಸ್ ಮುರಳಿ) ವಿರುದ್ದ ಪಾಲಕ್ಕಾಡ್‌ನ ಬಿಜೆಪಿ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ.

ವೇಡನ್ ಅವರ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವಂತಿದೆ, ವಿಭಜನೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದ್ದಾರೆ.

ಪಾಲಕ್ಕಾಡ್ ಪುರಸಭೆಯ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾಗಿರುವ ವಿ.ಎಸ್. ಮಿನಿಮೋಲ್ ಅವರು ವೇಡನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಎನ್‌ಐಎಗೆ ಪತ್ರ ಬರೆದಿದ್ದಾರೆ.

ವೇಡನ್ ಅವರ ಹಾಡಿನಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡುವಂತಹ ಅಂಶವಿದೆ. ಹಿಂದೂ ಸಮುದಾಯದೊಳಗೆ ಜಾತಿ ಆಧಾರಿತ ವಿಭಜನೆಗೆ ಕಾರಣವಾಗುವ ಪ್ರಚೋದನಕಾರಿ ಭಾಷೆಯನ್ನು ಬಳಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಧಾನಿ ಬಗ್ಗೆ ವೇಡನ್ ಆಧಾರರಹಿತ, ಆಕ್ಷೇಪಾರ್ಹ ಮತ್ತು ಅಗೌರವದ ಹೇಳಿಕೆಗಳನ್ನು ನೀಡಿದ್ದಾರೆ. ಇದು ಅವರ ವೈಯಕ್ತಿಕ ಮತ್ತು ರಾಜಕೀಯ ಇಮೇಜ್‌ಗೆ ಕಳಂಕ ತರುವುದಲ್ಲದೆ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಕುಂದಿಸುತ್ತದೆ” ಎಂದು ಮಿನಿಮೋಲ್ ಎರಡು ದಿನಗಳ ಹಿಂದೆ ಸಲ್ಲಿಸಲಾದ ದೂರಿನಲ್ಲಿ ಹೇಳಿದ್ದಾರೆ.

ಲೈವ್ ಕಾರ್ಯಕ್ರಮದಲ್ಲಿ ವೇಡನ್ ಮೋದಿ ಅವರನ್ನು ನೇರವಾಗಿ ಉಲ್ಲೇಖಿಸಿದ್ದಾರೆ. ಇದು ಪ್ರಧಾನ ಮಂತ್ರಿ ಕಚೇರಿಗೆ ತೋರಿದ ಅಗೌರವ ಮಾತ್ರವಲ್ಲದೆ, ಸಾರ್ವಜನಿಕ ದ್ವೇಷವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಮಿನಿಮೋಲ್ ತಿಳಿಸಿದ್ದಾರೆ.

ಕೊಚ್ಚಿ ಬಳಿಯ ತ್ರಿಪುನಿತುರದಲ್ಲಿ ಏಪ್ರಿಲ್ 28ರಂದು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರನ್ನು ಬಂಧಿಸಿದ್ದು ಸೇರಿದಂತೆ ಅವರಿಗೆ ಸಂಬಂಧಿಸಿತ ಇತರ ಪ್ರಕರಣಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚುವರಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾದರೂ, ವೇಡನ್ ದೊಡ್ಡ ಸಂಗೀತ ಕಚೇರಿಗಳನ್ನು ಆಯೋಜಿಸುವುದನ್ನು ಮುಂದುವರೆಸಿದ್ದಾರೆ. ಅಲ್ಲಿ ಅವರು ಪ್ರೇಕ್ಷಕರಲ್ಲಿ ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಾನನಷ್ಟ, ಗುಂಪು ದ್ವೇಷ ಹರಡುವಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವೇಡನ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಿನಿಮೋಲ್ ಕೋರಿದ್ದಾರೆ. ಸಂಬಂಧಿತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳಡಿಯೂ ಪ್ರಕರಣ ದಾಖಲಿಸುವಂತೆ ವಿನಂತಿಸಿದ್ದಾರೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ವೇಡನ್ ಮತ್ತು ಅವರ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸಂಘ ಪರಿವಾರದ ನಾಯಕರು ಇತ್ತೀಚೆಗೆ ವೇಡನ್ ವಿರುದ್ಧ ಮಾಡಿದ ಟೀಕೆಗಳನ್ನು ಅನುಸರಿಸಿ ಆರೋಪಗಳನ್ನು ಮಾಡಲಾಗಿದೆ.

ಬುಧವಾರ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಐಕ್ಯವೇದಿಕೆಯ ನಾಯಕಿ ಕೆ.ಪಿ ಶಶಿಕಲಾ, ವೇಡನ್ ಅವರ ಅನುಚಿತವಾಗಿ ಉಡುಗೆ ತೊಟ್ಟ ವರ್ತನೆಗಳು ಸಾಮಾಜಿಕ ಅವಮಾನ ಎಂದು ಟೀಕಿಸಿದ್ದರು ಮತ್ತು ಅವುಗಳನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದರು. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ರ‍್ಯಾಪ್ ಸಂಗೀತದ ಪ್ರಸ್ತುತತೆಯನ್ನು ಪ್ರಶ್ನಿಸಿದ್ದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ವೇಡನ್, ಶಶಿಕಲಾ ಅವರ ಜಾತಿವಾದಿ ಹೇಳಿಕೆಗಳು ನನ್ನನ್ನು ‘ಒಬ್ಬ ಉಗ್ರಗಾಮಿ, ಪ್ರತ್ಯೇಕತಾವಾದಿ ಅಥವಾ ತೊಂದರೆ ಕೊಡುವವ’ ಎಂದು ಬಿಂಬಿಸುವ ಪ್ರಯತ್ನಗಳಾಗಿವೆ ಎಂದು ಹೇಳಿದ್ದರು.

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...