Homeಮುಖಪುಟಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

- Advertisement -
- Advertisement -

ಬಲಂಪಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಕೇರಳದ ಜನಪ್ರಿಯ ದಲಿತ ರ‍್ಯಾಪರ್ ‘ವೇಡನ್’ (ಹಿರಂದಾಸ್ ಮುರಳಿ) ವಿರುದ್ದ ಪಾಲಕ್ಕಾಡ್‌ನ ಬಿಜೆಪಿ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ.

ವೇಡನ್ ಅವರ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವಂತಿದೆ, ವಿಭಜನೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದ್ದಾರೆ.

ಪಾಲಕ್ಕಾಡ್ ಪುರಸಭೆಯ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾಗಿರುವ ವಿ.ಎಸ್. ಮಿನಿಮೋಲ್ ಅವರು ವೇಡನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಎನ್‌ಐಎಗೆ ಪತ್ರ ಬರೆದಿದ್ದಾರೆ.

ವೇಡನ್ ಅವರ ಹಾಡಿನಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡುವಂತಹ ಅಂಶವಿದೆ. ಹಿಂದೂ ಸಮುದಾಯದೊಳಗೆ ಜಾತಿ ಆಧಾರಿತ ವಿಭಜನೆಗೆ ಕಾರಣವಾಗುವ ಪ್ರಚೋದನಕಾರಿ ಭಾಷೆಯನ್ನು ಬಳಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಧಾನಿ ಬಗ್ಗೆ ವೇಡನ್ ಆಧಾರರಹಿತ, ಆಕ್ಷೇಪಾರ್ಹ ಮತ್ತು ಅಗೌರವದ ಹೇಳಿಕೆಗಳನ್ನು ನೀಡಿದ್ದಾರೆ. ಇದು ಅವರ ವೈಯಕ್ತಿಕ ಮತ್ತು ರಾಜಕೀಯ ಇಮೇಜ್‌ಗೆ ಕಳಂಕ ತರುವುದಲ್ಲದೆ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಕುಂದಿಸುತ್ತದೆ” ಎಂದು ಮಿನಿಮೋಲ್ ಎರಡು ದಿನಗಳ ಹಿಂದೆ ಸಲ್ಲಿಸಲಾದ ದೂರಿನಲ್ಲಿ ಹೇಳಿದ್ದಾರೆ.

ಲೈವ್ ಕಾರ್ಯಕ್ರಮದಲ್ಲಿ ವೇಡನ್ ಮೋದಿ ಅವರನ್ನು ನೇರವಾಗಿ ಉಲ್ಲೇಖಿಸಿದ್ದಾರೆ. ಇದು ಪ್ರಧಾನ ಮಂತ್ರಿ ಕಚೇರಿಗೆ ತೋರಿದ ಅಗೌರವ ಮಾತ್ರವಲ್ಲದೆ, ಸಾರ್ವಜನಿಕ ದ್ವೇಷವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಮಿನಿಮೋಲ್ ತಿಳಿಸಿದ್ದಾರೆ.

ಕೊಚ್ಚಿ ಬಳಿಯ ತ್ರಿಪುನಿತುರದಲ್ಲಿ ಏಪ್ರಿಲ್ 28ರಂದು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರನ್ನು ಬಂಧಿಸಿದ್ದು ಸೇರಿದಂತೆ ಅವರಿಗೆ ಸಂಬಂಧಿಸಿತ ಇತರ ಪ್ರಕರಣಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚುವರಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾದರೂ, ವೇಡನ್ ದೊಡ್ಡ ಸಂಗೀತ ಕಚೇರಿಗಳನ್ನು ಆಯೋಜಿಸುವುದನ್ನು ಮುಂದುವರೆಸಿದ್ದಾರೆ. ಅಲ್ಲಿ ಅವರು ಪ್ರೇಕ್ಷಕರಲ್ಲಿ ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಾನನಷ್ಟ, ಗುಂಪು ದ್ವೇಷ ಹರಡುವಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವೇಡನ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಿನಿಮೋಲ್ ಕೋರಿದ್ದಾರೆ. ಸಂಬಂಧಿತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳಡಿಯೂ ಪ್ರಕರಣ ದಾಖಲಿಸುವಂತೆ ವಿನಂತಿಸಿದ್ದಾರೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ವೇಡನ್ ಮತ್ತು ಅವರ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸಂಘ ಪರಿವಾರದ ನಾಯಕರು ಇತ್ತೀಚೆಗೆ ವೇಡನ್ ವಿರುದ್ಧ ಮಾಡಿದ ಟೀಕೆಗಳನ್ನು ಅನುಸರಿಸಿ ಆರೋಪಗಳನ್ನು ಮಾಡಲಾಗಿದೆ.

ಬುಧವಾರ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಐಕ್ಯವೇದಿಕೆಯ ನಾಯಕಿ ಕೆ.ಪಿ ಶಶಿಕಲಾ, ವೇಡನ್ ಅವರ ಅನುಚಿತವಾಗಿ ಉಡುಗೆ ತೊಟ್ಟ ವರ್ತನೆಗಳು ಸಾಮಾಜಿಕ ಅವಮಾನ ಎಂದು ಟೀಕಿಸಿದ್ದರು ಮತ್ತು ಅವುಗಳನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದರು. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ರ‍್ಯಾಪ್ ಸಂಗೀತದ ಪ್ರಸ್ತುತತೆಯನ್ನು ಪ್ರಶ್ನಿಸಿದ್ದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ವೇಡನ್, ಶಶಿಕಲಾ ಅವರ ಜಾತಿವಾದಿ ಹೇಳಿಕೆಗಳು ನನ್ನನ್ನು ‘ಒಬ್ಬ ಉಗ್ರಗಾಮಿ, ಪ್ರತ್ಯೇಕತಾವಾದಿ ಅಥವಾ ತೊಂದರೆ ಕೊಡುವವ’ ಎಂದು ಬಿಂಬಿಸುವ ಪ್ರಯತ್ನಗಳಾಗಿವೆ ಎಂದು ಹೇಳಿದ್ದರು.

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...