Homeಮುಖಪುಟಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

- Advertisement -
- Advertisement -

ಬಲಂಪಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಕೇರಳದ ಜನಪ್ರಿಯ ದಲಿತ ರ‍್ಯಾಪರ್ ‘ವೇಡನ್’ (ಹಿರಂದಾಸ್ ಮುರಳಿ) ವಿರುದ್ದ ಪಾಲಕ್ಕಾಡ್‌ನ ಬಿಜೆಪಿ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ.

ವೇಡನ್ ಅವರ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವಂತಿದೆ, ವಿಭಜನೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದ್ದಾರೆ.

ಪಾಲಕ್ಕಾಡ್ ಪುರಸಭೆಯ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾಗಿರುವ ವಿ.ಎಸ್. ಮಿನಿಮೋಲ್ ಅವರು ವೇಡನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಎನ್‌ಐಎಗೆ ಪತ್ರ ಬರೆದಿದ್ದಾರೆ.

ವೇಡನ್ ಅವರ ಹಾಡಿನಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡುವಂತಹ ಅಂಶವಿದೆ. ಹಿಂದೂ ಸಮುದಾಯದೊಳಗೆ ಜಾತಿ ಆಧಾರಿತ ವಿಭಜನೆಗೆ ಕಾರಣವಾಗುವ ಪ್ರಚೋದನಕಾರಿ ಭಾಷೆಯನ್ನು ಬಳಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಧಾನಿ ಬಗ್ಗೆ ವೇಡನ್ ಆಧಾರರಹಿತ, ಆಕ್ಷೇಪಾರ್ಹ ಮತ್ತು ಅಗೌರವದ ಹೇಳಿಕೆಗಳನ್ನು ನೀಡಿದ್ದಾರೆ. ಇದು ಅವರ ವೈಯಕ್ತಿಕ ಮತ್ತು ರಾಜಕೀಯ ಇಮೇಜ್‌ಗೆ ಕಳಂಕ ತರುವುದಲ್ಲದೆ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಕುಂದಿಸುತ್ತದೆ” ಎಂದು ಮಿನಿಮೋಲ್ ಎರಡು ದಿನಗಳ ಹಿಂದೆ ಸಲ್ಲಿಸಲಾದ ದೂರಿನಲ್ಲಿ ಹೇಳಿದ್ದಾರೆ.

ಲೈವ್ ಕಾರ್ಯಕ್ರಮದಲ್ಲಿ ವೇಡನ್ ಮೋದಿ ಅವರನ್ನು ನೇರವಾಗಿ ಉಲ್ಲೇಖಿಸಿದ್ದಾರೆ. ಇದು ಪ್ರಧಾನ ಮಂತ್ರಿ ಕಚೇರಿಗೆ ತೋರಿದ ಅಗೌರವ ಮಾತ್ರವಲ್ಲದೆ, ಸಾರ್ವಜನಿಕ ದ್ವೇಷವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಮಿನಿಮೋಲ್ ತಿಳಿಸಿದ್ದಾರೆ.

ಕೊಚ್ಚಿ ಬಳಿಯ ತ್ರಿಪುನಿತುರದಲ್ಲಿ ಏಪ್ರಿಲ್ 28ರಂದು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರನ್ನು ಬಂಧಿಸಿದ್ದು ಸೇರಿದಂತೆ ಅವರಿಗೆ ಸಂಬಂಧಿಸಿತ ಇತರ ಪ್ರಕರಣಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚುವರಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾದರೂ, ವೇಡನ್ ದೊಡ್ಡ ಸಂಗೀತ ಕಚೇರಿಗಳನ್ನು ಆಯೋಜಿಸುವುದನ್ನು ಮುಂದುವರೆಸಿದ್ದಾರೆ. ಅಲ್ಲಿ ಅವರು ಪ್ರೇಕ್ಷಕರಲ್ಲಿ ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಾನನಷ್ಟ, ಗುಂಪು ದ್ವೇಷ ಹರಡುವಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವೇಡನ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಿನಿಮೋಲ್ ಕೋರಿದ್ದಾರೆ. ಸಂಬಂಧಿತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳಡಿಯೂ ಪ್ರಕರಣ ದಾಖಲಿಸುವಂತೆ ವಿನಂತಿಸಿದ್ದಾರೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ವೇಡನ್ ಮತ್ತು ಅವರ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸಂಘ ಪರಿವಾರದ ನಾಯಕರು ಇತ್ತೀಚೆಗೆ ವೇಡನ್ ವಿರುದ್ಧ ಮಾಡಿದ ಟೀಕೆಗಳನ್ನು ಅನುಸರಿಸಿ ಆರೋಪಗಳನ್ನು ಮಾಡಲಾಗಿದೆ.

ಬುಧವಾರ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಐಕ್ಯವೇದಿಕೆಯ ನಾಯಕಿ ಕೆ.ಪಿ ಶಶಿಕಲಾ, ವೇಡನ್ ಅವರ ಅನುಚಿತವಾಗಿ ಉಡುಗೆ ತೊಟ್ಟ ವರ್ತನೆಗಳು ಸಾಮಾಜಿಕ ಅವಮಾನ ಎಂದು ಟೀಕಿಸಿದ್ದರು ಮತ್ತು ಅವುಗಳನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದರು. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ರ‍್ಯಾಪ್ ಸಂಗೀತದ ಪ್ರಸ್ತುತತೆಯನ್ನು ಪ್ರಶ್ನಿಸಿದ್ದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ವೇಡನ್, ಶಶಿಕಲಾ ಅವರ ಜಾತಿವಾದಿ ಹೇಳಿಕೆಗಳು ನನ್ನನ್ನು ‘ಒಬ್ಬ ಉಗ್ರಗಾಮಿ, ಪ್ರತ್ಯೇಕತಾವಾದಿ ಅಥವಾ ತೊಂದರೆ ಕೊಡುವವ’ ಎಂದು ಬಿಂಬಿಸುವ ಪ್ರಯತ್ನಗಳಾಗಿವೆ ಎಂದು ಹೇಳಿದ್ದರು.

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...