Homeಕರ್ನಾಟಕದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

- Advertisement -
- Advertisement -

ಮುಸ್ಲಿಮರನ್ನು ‘ನುಸುಳುಕೋರರು’ ಎಂದು ಕರೆದಿದಲ್ಲದೆ, ಕಾಂಗೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಝಿಯಾವುರಹ್ಮಾನ್ ನೊಮಾನಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದು,”ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಏಪ್ರಿಲ್ 21, 2024ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ, ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್‌ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಧಾನಿ ಮೋದಿಯವರ ದ್ವೇಷ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲಾ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಕಂಡಿದ್ದು, ಇದು ಪ್ರಕರಣದಲ್ಲಿ ಸಾಕ್ಷಿಯಾಗಿರುವ ಆರ್‌ ಕಲೀಮುಲ್ಲಾ ಅವರ ಗಮನಕ್ಕೂ ಬಂದಿದೆ. ಹೀಗಾಗಿ, ಏಪ್ರಿಲ್‌ 26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಮೃತಹಳ್ಳಿ ಪೊಲೀಸರು ಇದು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್‌ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಇದಾದ ಬಳಿಕ ಏಪ್ರಿಲ್‌ 27ರಂದು ದೂರುದಾರ ನೊಮಾನಿ ಈಮೇಲ್‌ ಮೂಲಕ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲಿಂದಲೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆ ಮೇ 23ರಂದು ನ್ಯಾಯಾಲಯದ ಮೆಟ್ಟಿಲೇರಲಾಗಿದೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ. ಪ್ರಕರಣದ ವಿಚಾರಣೆ ಮೇ 28ಕ್ಕೆ ನಿಗದಿಯಾಗಿದೆ.

ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಬಿಜೆಪಿಯ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ, “ನಮ್ಮ ತಾಯಂದಿರು, ಸಹೋದರಿಯರ ಬಂಗಾರದ ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಮನಮೋಹನ್‌ ಸಿಂಗ್‌ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಬೇಕೆ? ಅದಕ್ಕೆ ನಿಮ್ಮ ಒಪ್ಪಿಗೆ ಇದೆಯೇ? ಎಂದಿದ್ದರು.

ಇದನ್ನೂ ಓದಿ : ಒಬಿಸಿ ಪಟ್ಟಿಯಿಂದ 14 ಮುಸ್ಲಿಂ ಗುಂಪುಗಳನ್ನು ಕೈಬಿಡಲು ರಾಜಸ್ಥಾನ ಸರ್ಕಾರ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...