Homeಕರ್ನಾಟಕರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದ ಬಿಜೆಪಿ ಶಾಸಕರು

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಈಶ್ವರಪ್ಪ ಅವರ ಮೇಲೆ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತಿದ್ದು, “ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗಳಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮಾಡುವಂತೆ ನಾವೆಲ್ಲಾ ಶಾಸಕರು ಮನವಿ ಮಾಡಿದ್ದೆವು, ಮುಖ್ಯಮಂತ್ರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಈಶ್ವರಪ್ಪ ಹೇಳಿದಂತೆ ಅವರ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿಲ್ಲ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ನಾಯಕತ್ವ ಬದಲಾವಣೆಗೆ ಇದು ಮುನ್ನುಡಿ ಅಲ್ಲ. ಯಡಿಯೂರಪ್ಪನವರೇ ಮುಂದೆಯೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಈಗಾಗಲೇ ಈಶ್ವರಪ್ಪನವರೇ ಹೇಳಿದ್ದಾರೆ. ಹೀಗಾಗಿ ಈಶ್ವರಪ್ಪನವರ ದೂರಿಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ, ಒಗ್ಗಟ್ಟಾಗಿಯೇ ಇದ್ದೇವೆ. ಯಡಿಯೂರಪ್ಪನವರೇ ಮುಂದಿನ 2 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬುದರಲ್ಲಿ ಯಾರಿಗೂ ಯಾವುದೇ ಅನುಮಾನವಿಲ್ಲ. ಆದರೆ ಈಶ್ವರಪ್ಪ ಮಾತ್ರ ಈ ರೀತಿ ಮಾಡಿದ್ದು ಸರಿಯಲ್ಲ” ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಂತರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಈ ಬಗ್ಗೆ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ ಅವರು, “ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ನೀರಿನಿಂದ ಹೊರಗೆ ಬಂದ ಮೇಲೆ ಮೀನು ಒದ್ದಾಡುತ್ತಲ್ಲ ಹಾಗೆಯೆ ಕಾಂಗ್ರೆಸ್‌ನವರ ಕಥೆಯೂ ಆಗಿದೆ. ಕಾಂಗ್ರೆಸ್​ನಿಂದ A ಯಿಂದ Z ವರೆಗೆ ಎಲ್ಲರೂ ಖುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇವರು ನಮ್ಮ ಬಗ್ಗೆ ಏನು ಹೇಳೋದು?” ಎಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಮುಖಂಡ ಈಶ್ವರಪ್ಪ ವಿರುದ್ದ ಗರಂ!

ಸ್ವತಃ ಈಶ್ವರಪ್ಪ ಅವರ ನೇತೃತ್ವದಲ್ಲೇ ಸ್ಥಾಪನೆಯಾದ ರಾಯಣ್ಣ ಬ್ರಿಗೇಡ್ ಮುಖಂಡ, ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...