Homeಕರ್ನಾಟಕರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದ ಬಿಜೆಪಿ ಶಾಸಕರು

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಈಶ್ವರಪ್ಪ ಅವರ ಮೇಲೆ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತಿದ್ದು, “ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗಳಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮಾಡುವಂತೆ ನಾವೆಲ್ಲಾ ಶಾಸಕರು ಮನವಿ ಮಾಡಿದ್ದೆವು, ಮುಖ್ಯಮಂತ್ರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಈಶ್ವರಪ್ಪ ಹೇಳಿದಂತೆ ಅವರ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿಲ್ಲ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ನಾಯಕತ್ವ ಬದಲಾವಣೆಗೆ ಇದು ಮುನ್ನುಡಿ ಅಲ್ಲ. ಯಡಿಯೂರಪ್ಪನವರೇ ಮುಂದೆಯೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಈಗಾಗಲೇ ಈಶ್ವರಪ್ಪನವರೇ ಹೇಳಿದ್ದಾರೆ. ಹೀಗಾಗಿ ಈಶ್ವರಪ್ಪನವರ ದೂರಿಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ, ಒಗ್ಗಟ್ಟಾಗಿಯೇ ಇದ್ದೇವೆ. ಯಡಿಯೂರಪ್ಪನವರೇ ಮುಂದಿನ 2 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬುದರಲ್ಲಿ ಯಾರಿಗೂ ಯಾವುದೇ ಅನುಮಾನವಿಲ್ಲ. ಆದರೆ ಈಶ್ವರಪ್ಪ ಮಾತ್ರ ಈ ರೀತಿ ಮಾಡಿದ್ದು ಸರಿಯಲ್ಲ” ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಂತರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಈ ಬಗ್ಗೆ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ ಅವರು, “ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ನೀರಿನಿಂದ ಹೊರಗೆ ಬಂದ ಮೇಲೆ ಮೀನು ಒದ್ದಾಡುತ್ತಲ್ಲ ಹಾಗೆಯೆ ಕಾಂಗ್ರೆಸ್‌ನವರ ಕಥೆಯೂ ಆಗಿದೆ. ಕಾಂಗ್ರೆಸ್​ನಿಂದ A ಯಿಂದ Z ವರೆಗೆ ಎಲ್ಲರೂ ಖುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇವರು ನಮ್ಮ ಬಗ್ಗೆ ಏನು ಹೇಳೋದು?” ಎಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಮುಖಂಡ ಈಶ್ವರಪ್ಪ ವಿರುದ್ದ ಗರಂ!

ಸ್ವತಃ ಈಶ್ವರಪ್ಪ ಅವರ ನೇತೃತ್ವದಲ್ಲೇ ಸ್ಥಾಪನೆಯಾದ ರಾಯಣ್ಣ ಬ್ರಿಗೇಡ್ ಮುಖಂಡ, ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...