Homeಕರ್ನಾಟಕರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದ ಬಿಜೆಪಿ ಶಾಸಕರು

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಈಶ್ವರಪ್ಪ ಅವರ ಮೇಲೆ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತಿದ್ದು, “ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗಳಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮಾಡುವಂತೆ ನಾವೆಲ್ಲಾ ಶಾಸಕರು ಮನವಿ ಮಾಡಿದ್ದೆವು, ಮುಖ್ಯಮಂತ್ರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಈಶ್ವರಪ್ಪ ಹೇಳಿದಂತೆ ಅವರ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿಲ್ಲ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ನಾಯಕತ್ವ ಬದಲಾವಣೆಗೆ ಇದು ಮುನ್ನುಡಿ ಅಲ್ಲ. ಯಡಿಯೂರಪ್ಪನವರೇ ಮುಂದೆಯೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಈಗಾಗಲೇ ಈಶ್ವರಪ್ಪನವರೇ ಹೇಳಿದ್ದಾರೆ. ಹೀಗಾಗಿ ಈಶ್ವರಪ್ಪನವರ ದೂರಿಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ, ಒಗ್ಗಟ್ಟಾಗಿಯೇ ಇದ್ದೇವೆ. ಯಡಿಯೂರಪ್ಪನವರೇ ಮುಂದಿನ 2 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬುದರಲ್ಲಿ ಯಾರಿಗೂ ಯಾವುದೇ ಅನುಮಾನವಿಲ್ಲ. ಆದರೆ ಈಶ್ವರಪ್ಪ ಮಾತ್ರ ಈ ರೀತಿ ಮಾಡಿದ್ದು ಸರಿಯಲ್ಲ” ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಂತರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಈ ಬಗ್ಗೆ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ ಅವರು, “ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ನೀರಿನಿಂದ ಹೊರಗೆ ಬಂದ ಮೇಲೆ ಮೀನು ಒದ್ದಾಡುತ್ತಲ್ಲ ಹಾಗೆಯೆ ಕಾಂಗ್ರೆಸ್‌ನವರ ಕಥೆಯೂ ಆಗಿದೆ. ಕಾಂಗ್ರೆಸ್​ನಿಂದ A ಯಿಂದ Z ವರೆಗೆ ಎಲ್ಲರೂ ಖುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇವರು ನಮ್ಮ ಬಗ್ಗೆ ಏನು ಹೇಳೋದು?” ಎಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಮುಖಂಡ ಈಶ್ವರಪ್ಪ ವಿರುದ್ದ ಗರಂ!

ಸ್ವತಃ ಈಶ್ವರಪ್ಪ ಅವರ ನೇತೃತ್ವದಲ್ಲೇ ಸ್ಥಾಪನೆಯಾದ ರಾಯಣ್ಣ ಬ್ರಿಗೇಡ್ ಮುಖಂಡ, ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...