Homeಕರ್ನಾಟಕರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದ ಬಿಜೆಪಿ ಶಾಸಕರು

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದ ಸಚಿವ ಈಶ್ವರಪ್ಪ ಅವರ ಮೇಲೆ ಬಿಜೆಪಿ ಶಾಸಕರು ಮುಗಿಬಿದ್ದಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತಿದ್ದು, “ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗಳಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ನಾಲ್ಕು ಗೋಡೆ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮಾಡುವಂತೆ ನಾವೆಲ್ಲಾ ಶಾಸಕರು ಮನವಿ ಮಾಡಿದ್ದೆವು, ಮುಖ್ಯಮಂತ್ರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ. ಆದರೆ ಈಶ್ವರಪ್ಪ ಹೇಳಿದಂತೆ ಅವರ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿಲ್ಲ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ನಾಯಕತ್ವ ಬದಲಾವಣೆಗೆ ಇದು ಮುನ್ನುಡಿ ಅಲ್ಲ. ಯಡಿಯೂರಪ್ಪನವರೇ ಮುಂದೆಯೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಈಗಾಗಲೇ ಈಶ್ವರಪ್ಪನವರೇ ಹೇಳಿದ್ದಾರೆ. ಹೀಗಾಗಿ ಈಶ್ವರಪ್ಪನವರ ದೂರಿಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ, ಒಗ್ಗಟ್ಟಾಗಿಯೇ ಇದ್ದೇವೆ. ಯಡಿಯೂರಪ್ಪನವರೇ ಮುಂದಿನ 2 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬುದರಲ್ಲಿ ಯಾರಿಗೂ ಯಾವುದೇ ಅನುಮಾನವಿಲ್ಲ. ಆದರೆ ಈಶ್ವರಪ್ಪ ಮಾತ್ರ ಈ ರೀತಿ ಮಾಡಿದ್ದು ಸರಿಯಲ್ಲ” ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಂತರ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಈ ಬಗ್ಗೆ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ ಅವರು, “ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ನೀರಿನಿಂದ ಹೊರಗೆ ಬಂದ ಮೇಲೆ ಮೀನು ಒದ್ದಾಡುತ್ತಲ್ಲ ಹಾಗೆಯೆ ಕಾಂಗ್ರೆಸ್‌ನವರ ಕಥೆಯೂ ಆಗಿದೆ. ಕಾಂಗ್ರೆಸ್​ನಿಂದ A ಯಿಂದ Z ವರೆಗೆ ಎಲ್ಲರೂ ಖುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇವರು ನಮ್ಮ ಬಗ್ಗೆ ಏನು ಹೇಳೋದು?” ಎಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಮುಖಂಡ ಈಶ್ವರಪ್ಪ ವಿರುದ್ದ ಗರಂ!

ಸ್ವತಃ ಈಶ್ವರಪ್ಪ ಅವರ ನೇತೃತ್ವದಲ್ಲೇ ಸ್ಥಾಪನೆಯಾದ ರಾಯಣ್ಣ ಬ್ರಿಗೇಡ್ ಮುಖಂಡ, ಶಾಸಕ ವಿರೂಪಾಕ್ಷ ಕೂಡಾ ತಿರುಗಿ ಬಿದ್ದಿದ್ದು, “ಈಶ್ವರಪ್ಪ ಮನಸ್ಸಿಗೆ ಏನಾದರೂ ನೋವಾಗಿದ್ದರೆ ಬಂದು ಅದನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಕ್ಯಾಬಿನೆಟ್ ಸಚಿವರಾಗಿ ಸಿಎಂ ಮೇಲೆ ಈ ರೀತಿ ದೂರು ಕೊಡುವುದು ಸರಿಯಲ್ಲ. ಹೀಗಾಗಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕು. ಇನ್ನು ಮುಂದೆ ಈಶ್ವರಪ್ಪ ಈ ರೀತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ದೂರು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...