Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...