Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...