Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...