Homeಕರ್ನಾಟಕಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ದೂರು

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ದೂರು

- Advertisement -
- Advertisement -

ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು ಹಾಗೂ ಕಾಳಜಿಯುಳ್ಳ ನಾಗರಿಕರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿಯಾದ ತಂಡ, ಪ್ರಧಾನಿ ಮೋದಿ ವಿರುದ್ಧದ ದೂರಿನ ಪ್ರತಿ, ಸಂವಿಧಾನದ ಪೀಠಿಕೆ ಮತ್ತು ನೀತಿ ಸಂಹಿತೆ ನಿಯಮಗಳ ಪ್ರತಿಯನ್ನು ನೀಡಿದೆ.

ಭಾರತೀಯ ಚುನಾವಣಾ ಆಯೋಗದ ಕಾನೂನಿನ ಪ್ರಕಾರ ಮೋದಿಯವರು ಮಾಡಿದ ಭಾಷಣದ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಅನರ್ಹಗೊಳಿಸಬೇಕು ಮತ್ತು ಅವರನ್ನು ಪ್ರಚಾರ ಮಾಡುವುದರಿಂದ ನಿಷೇಧಿಸಬೇಕು.
ದ್ವೇಷ ಭಾಷಣ ಮಾಡುವುದರ ಮೂಲಕ ಮೋದಿ ಸಮಾಜದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ದೂರಿನ ಪ್ರತಿ 

ಹಿಂದೂ ಸಮಾಜದ ಮತ ಪಡೆಯಲು ಸುಳ್ಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದರ ಜೊತೆಗೆ, ಮುಸ್ಲಿಂ ಸಮುದಾಯದ ಬಗ್ಗೆ ಹಲವು ಅಪಾಯಕಾರಿ ಚಿಂತನೆಗಳನ್ನು ಹಬ್ಬಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿಗೆ ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಈ ಘಟನೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ, ದೂರನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ರವಾನಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ದ್ವೇಷ ಭಾಷಣಗಳು ನಡೆದ‌ ಕಡೆ ನಾವು ಎಫ್‌ಐಆರ್ ದಾಖಲಿಸುತಿದ್ದೇವೆ. ಆದರೆ, ಯಾವುದೇ ಅಭ್ಯರ್ಥಿಯನ್ನು ಚುನಾಣಾ ಪ್ರಚಾರದಿಂದ ನಿರ್ಬಂಧಿಸಲು ನನಗೆ ಅಧಿಕಾರವಿಲ್ಲ. ಈ ವಿಷಯದ ಕುರಿತು ನಾವು ಹೇಗಿದ್ದರೂ ಪಕ್ಷಗಳ ವಿರುದ್ದ ಕ್ರಿಮಿನಲ್ ಕ್ರಮ ತೆಗೆದುಕೊಂಡ ಕಾರಣ, ಆ ಪಕ್ಷಗಳಿಗೆ ನೋಟಿಸ್ ಏನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಈ ದೂರು ಸಲ್ಲಿಸಿದ ಸಂಸ್ಥೆಗಳು :

1. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL)

2. ಬಹುತ್ವ ಕರ್ನಾಟಕ

3. ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (AILAJ)

4. ದ್ವೇಷ ಭಾಷಣದ ವಿರುದ್ಧ ಜನಾಂದೋಲನ

5. ಪೀಪಲ್ಸ್ ವಾಚ್

6. ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವಿಮೆನ್ (NFIW)

7. ನ್ಯಾಷನಲ್ ಅಲೈಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ಸ್ (NAPM)

8. ನ್ಯೂ ಟ್ರೇಡ್ ಯೂನಿಯನ್ ಇನಿಶಿಯೇಟಿವ್ (NTUI)

9. ಹ್ಯೂಮನ್ ರೈಟ್ಸ್ ಫೋರಮ್ (HRF)

10. ಲಾ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್

11. ಸೇವ್ ದಿ ನೇಷನ್

12. ತಮಿಳುನಾಡು ಪೊದುಮೇಡೈ

13. ಭಾರತ್ ಜೋಡೋ ಅಭಿಯಾನ್, ಮುಂಬೈ

14. ಸ್ಟೂಡೆಂಟ್ಸ್ಪೀ ಫಾರ್ಪ ಪೀಪಲ್ಸ್ ಡೆಮಾಕ್ರಸಿಗಾಗಿ

15. ಆಲ್ ಇಂಡಿಯಾ ಡೆಮಾಕ್ರೆಟಿಕ್ ವಿಮೆನ್ಸ್ ಅಸೋಸಿಯೇಷನ್ (AIDWA)

ಇದನ್ನೂ ಓದಿ : ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...