Homeಕರ್ನಾಟಕಸಂಯೋಜನೆ ಹೆಸರಿನಲ್ಲಿ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಬೀಗ - ಎಐಡಿಎಸ್ಓ ಪ್ರತಿಭಟನೆ

ಸಂಯೋಜನೆ ಹೆಸರಿನಲ್ಲಿ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಬೀಗ – ಎಐಡಿಎಸ್ಓ ಪ್ರತಿಭಟನೆ

- Advertisement -
- Advertisement -

ಸಂಯೋಜನೆ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಸೋಮವಾರ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಎಂದು ಎಐಡಿಎಸ್ಓ ಹೇಳಿದ್ದು, ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಚಾಂಜಿ ಸುಭಾಷ್ ಬೆಟ್ಟದ ಕೊಪ್ಪ, “ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ” ಎಂದು ಹೇಳಿದ್ದಾರೆ. ಸಂಯೋಜನೆ ಹೆಸರಿನಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಎಲ್ಲಾ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೊರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಲ್ಯಾಣ್ ಅವರು ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 6,000 ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 50,000 ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ'” ಎಂದು ಹೇಳಿದ್ದಾರೆ.

ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ. “ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕು” ಎಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಬಲಿಷ್ಠ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಶಾಲೆಗಳ ಸಂಯೋಜನೆಯನ್ನು ಕೈಬಿಟ್ಟು ಸಮರ್ಪಕ ಮೂಲಭೂತ ಸೌಲಭ್ಯ ನೀಡಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂಓದಿ:  ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...