Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...