Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...