Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...