Homeಮುಖಪುಟಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ, ಶ್ರೀರಂಗಪಟ್ಟಣದ ಮಸ್ಜೀದ್-ಈ-ಆಲಾ, ಮಥುರಾದಲ್ಲಿರುವ ಶಾಹೀ ಈದ್ಗಾ ಮಸೀದಿ, ದಿಲ್ಲಿಯ ಕುತುಬ್ ಮಿನಾರ್ – ಇವೆಲ್ಲೆಡೆ ಹಿಂದುತ್ವ ಸಂಘಟನೆಗಳು ಇಲ್ಲದ ವಿವಾದ ಸೃಷ್ಟಿಸಿವೆ. ಈ ಸಂಘಟನೆಗಳ ಮನುವಾದಿ, ಕೋಮುವಾದಿ ನಡೆ ಬಗ್ಗೆ ನಮಗೆಲ್ಲರಿಗೂ
ಗೊತ್ತಿರುವಂಥದ್ದೇ. ಆದರೆ ನಮಗೆ ಆತಂಕವಾಗಿರಬೇಕಾಗಿರುವ ವಿಷಯವೆಂದರೆ ನಮ್ಮ ನ್ಯಾಯಾಲಯಗಳ ಪ್ರತಿಕ್ರಿಯೆ. ಹಿಂದುತ್ವ ಸಂಘಟನೆಗಳು ಮಸೀದಿಗಳ ಮೇಲೆ ನಡೆಸುತ್ತಿರುವ ದಾಳಿಗಳಿಗೆ ನ್ಯಾಯಾಲಯಗಳು ಕೈ ಜೋಡಿಸಿವೆಯೇ ಎಂಬ ಅನುಮಾನ ಮೂಡುತ್ತದೆ. ಈ ಅನುಮಾನವನ್ನು ಈ ಬರೆಹದಲ್ಲಿ ಪರಿಶೀಲಿಸೋಣ. ಮುಖ್ಯವಾಗಿ ಜ್ಞಾನವಾಪಿ ಮಸೀದಿಯ ವಿಷಯದಲ್ಲಿ ನ್ಯಾಯಾಲಯಗಳ ನಡೆಯನ್ನು ಗಮನಿಸೋಣ.

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಯಿತು ಎಂದು ಹಿಂದೂ ಪರ ಸಂಘಟನೆಗಳು ಹೇಳಿಕೊಂಡ ತಕ್ಷಣ, ವಾರಣಾಸಿಯ ನ್ಯಾಯಾಲಯ, ಅದು ಪತ್ತೆಯಾಗಿದೆ ಎಂದು ಪ್ರತಿಪಾದಿಸಿದ ಜಾಗವನ್ನು ಬಂದ್ ಮಾಡಲು ಅದೇಶಿಸಿತು. ನ್ಯಾಯಾಲಯವೇ ನೇಮಿಸಿದ್ದ ’ಕೋರ್ಟ್ ಕಮಿಷಿನರ್’ ವರದಿ ಸಲ್ಲಿಸುವ ತನಕ ಸಹ ಕಾಯಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಅಸಾದುದ್ದೀನ್ ಒವೈಸಿಯವರು, “ದಿಸ್ ಇಸ್ ಎ ಟೆಕ್ಸ್ಟ್ ಬುಕ್ ರಿಪೀಟ್ ಆಪ್ ಡಿಸೆಂಬರ್ 1949 ಇನ್ ಬಾಬ್ರಿ ಮಸ್ಜಿದ್” ಎಂದರು.

ಬಾಬ್ರಿ ಮಸೀದಿ ಸುತ್ತ ಸೃಷ್ಟಿಸಿದ ವಿವಾದ ಸ್ವತಂತ್ರ ಭಾರತದ ರಾಜಕೀಯ ಹಾಗು ಸಾಮಾಜಿಕ ಇತಿಹಾಸವನ್ನು ಇನ್ನಿಲ್ಲದಂತೆ ಬದಲಿಸಿತು. ಈ ಪ್ರಕರಣದ ಅಂತಿಮ ತೀರ್ಪು ಹಾಗು ಅದರಲ್ಲಿ ಅಡಗಿದ ಅನ್ಯಾಯದ ಬಗ್ಗೆ ಸಾಕಷ್ಟು ಬರೆದಾಗಿದೆ. ಆದರೆ ಈ ಪ್ರಕರಣ ಈ ಮಟ್ಟಕ್ಕೆ ಬೆಳೆದಿದ್ದು ನ್ಯಾಯಾಲಯಗಳು ತಮ್ಮ ಸಂವಿಧಾನಿಕ ಜವಾಬ್ದಾರಿ ಮರೆತು, ಹಿಂದುತ್ವವಾದಿಗಳಿಗೆ ನೀಡಿದ ನೆರವಿನಿಂದಲೇ.

1949ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದೇನು ಹಾಗು ಅದಕ್ಕೆ ನ್ಯಾಯಾಲಯಗಳು ಹೇಗೆ ಸ್ಪಂದಿಸಿದವು ಎಂಬುದನ್ನು ವಕೀಲರಾದ ಮೊಹಮ್ಮದ್ ಅಫೀಫ್ ಅವರು ವಿವರಿಸಿದ್ದಾರೆ. ಮೊದಲನೆಯದಾಗಿ ಡಿಸೆಂಬರ್ 23, 1949ರ ರಾತ್ರಿ, ಮಸೀದಿಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ, ಕೆಲವರು ಮಸೀದಿಯೊಳಗೆ ನುಗ್ಗಿ ಅಲ್ಲಿ ಕಳ್ಳತನದಿಂದ ಹಿಂದೂ ದೇವರ ವಿಗ್ರಹ ಇಟ್ಟರು. ಅಲ್ಲಿಗೆ ನಂತರ ಹೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಮಸೀದಿಗೆ ಬೀಗ ಹಾಕಿ, ಆ ಸ್ಥಳವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಮಾಡಿದರು. ಆದರೆ, ಕಾನೂನುಬಾಹಿರವಾಗಿ ಅಲ್ಲಿಟ್ಟ ವಿಗ್ರಹಗಳನ್ನು ಮಾತ್ರ ತೆಗೆಸುವುದಿಲ್ಲ. ನಂತರ 1950ರಲ್ಲಿ ಇಬ್ಬರು ಹಿಂದೂ ಅರ್ಜಿದಾರರು ಸಿವಿಲ್ ನ್ಯಾಯಾಲಯದ ಮೊರೆಹೋಗಿ, ಮಸೀದಿ ಇರುವ ಸ್ಥಳ ಅವರದ್ದು ಎಂದು ಅರ್ಜಿ ಹಾಕುತ್ತಾರೆ. ಆ ಪ್ರಕರಣದಲ್ಲಿ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಿ, ಮಸೀದಿಯಲ್ಲಿಟ್ಟ ವಿಗ್ರಹಗಳನ್ನು ಯಾರೂ ಜರಿಗಿಸಬಾರದೆಂದು ತೀರ್ಪು ನೀಡುತ್ತದೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ನಿಲುವು, ಆ ಸ್ಥಳವನ್ನು 1949ರಲ್ಲಿ ಮಸೀದಿಯಾಗಿ ಉಪಯೋಗಿಸಲಾಗುತ್ತಿತ್ತು ಎಂಬುದು. ಹಾಗಿದ್ದರೂ ಸಹ ನ್ಯಾಯಾಲಯವು ಮಸೀದಿಯನ್ನು ಬಂದ್ ಮಾಡಿ, ಯಾರಿಗೂ ಪ್ರವೇಶ ನೀಡದಂತೆ ಆದೇಶಿಸುತ್ತದೆ. ನಂತರ ಉತ್ತರ ಪ್ರದೇಶ ಉಚ್ಚ ನ್ಯಾಯಾಲಯವು ಸಿವಿಲ್ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿಯುತ್ತದೆ. ಹಾಗಾಗಿ, 1949ರಲ್ಲಿ ಮಸೀದಿಗೆ ನುಗ್ಗಿ ಅಲ್ಲಿ ವಿಗ್ರಹಗಳನ್ನು ಇಟ್ಟ ಕಾನೂನುಬಾಹಿರ ಕಾರ್ಯವನ್ನು ನ್ಯಾಯಾಲಯವೆ ನ್ಯಾಯಸಮ್ಮತಗೊಳಿಸುತ್ತದೆ. ಅದು ಅಲ್ಲಿಗೆ ನಿಲ್ಲುವುದಿಲ್ಲ. ಈ ಸಿವಿಲ್ ಪ್ರಕರಣಗಳು ದಶಕಗಳ ಕಾಲ ನಡೆಯುತಿದ್ದವು. 1989ರಲ್ಲಿ ದಿಢೀರ್ ಎಂದು ಒಂದು ದಿನ, ಈ ಪ್ರಕರಣದ ಭಾಗವೇ ಅಲ್ಲದ ಹಿಂದೂ ವ್ಯಕ್ತಿಯೊಬ್ಬರು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಪ್ರಕರಣದಲ್ಲಿ ಪಾರ್ಟಿಯಾಗಿರುವ ಮುಸ್ಲಿಂ ಅರ್ಜಿದಾರರಿಗೆ ತಿಳಿಸದೆ, ಅದರ ಬಗ್ಗೆ ಹಿಯರಿಂಗ್ ಮಾಡಿ, ಮಸೀದಿಯ ಬಾಗಿಲುಗಳನ್ನು ತೆಗೆದು ಅಲ್ಲಿ ಹಿಂದೂಗಳಿಗೆ 1949ರಲ್ಲಿ ಇಟ್ಟ ವಿಗ್ರಹಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗುತ್ತದೆ. ದಿಢೀರೆಂದು ನೂರಾರು ವರ್ಷಗಳಿಂದ ನಡೆದುಕೊಂಡಂತ ಮಸೀದಿ, ನ್ಯಾಯಾಲಯದ ಈ ತೀರ್ಪಿನಿಂದ ದೇವಾಲಯವಾಗಿ ಪರಿವರ್ತನೆಯಾಯಿತು. ಪ್ರಕರಣದ ಭಾಗವೇ ಆಗದಿದ್ದವರಿಗೆ ಪ್ರಕರಣದಲ್ಲಿ ಅರ್ಜಿ ಹಾಕಲು ’ಲೋಕಸ್ ಸ್ಟಾಂಡಿ’ ಇಲ್ಲ (ಎಂದರೆ ಅಧಿಕಾರ ಇಲ್ಲ). ಇಂತಹ ವ್ಯಕ್ತಿಯ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು, ಪ್ರಕರಣದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಂಘಟನೆಗಳ ವಾದವನ್ನೂ ಕೇಳಿಸಿಕೊಳ್ಳದೆ ನೀಡಿದ ತೀರ್ಪು, ’ಪ್ರಿನ್ಸಿಪಲ್ಸ್ ಆಫ್ ನ್ಯಾಚುರಲ್ ಜಸ್ಟಿಸ್’ಗೆ ವಿರುದ್ಧವಾಗಿದೆ.

ಅಸಾದುದ್ದೀನ್ ಒವೈಸಿ

ಈ ಸಮಯದಲ್ಲಿ ಇದನ್ನು ಏಕೆ ನೆನೆಯಬೇಕೆಂದರೆ ಜ್ಞಾನವಾಪಿ ಮಸೀದಿಯಲ್ಲಿ ಸಹ ಇದೇ ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸುತ್ತ ಸೃಷ್ಟಿಸಿರುವ ವಿವಾದದ ಲೀಗಲ್ ಕಾಲಾನುಕ್ರಮ-ಇತಿಹಾಸ ಹೀಗಿದೆ:


ಎಲ್ಲದಕ್ಕಿಂತ ಆತಂಕಕಾರಿ ವಿಷಯವೆಂದರೆ, ಸುಪ್ರೀಂ ಕೋರ್ಟ್‌ನ ಸದರಿ ಪ್ರಕರಣವನ್ನು ಆಲಿಸುತ್ತಿರುವ ಬೆಂಚ್‌ನಲ್ಲಿ ಇರುವ ಜಸ್ಟಿಸ್ ಚಂದ್ರಚೂಡ್ ಬಾಬ್ರಿ ತೀರ್ಪಿನಲ್ಲಿ ಪ್ಲೇಸಸ್ ಆಫ್ ವರ್ಷಿಪ್ ಕಾಯ್ದೆ ಬಹು ಮುಖ್ಯ, ಅದನ್ನು ಉಲ್ಲಂಘಿಸಬಾರದೆಂದು ಹೇಳಿದ್ದರು; ಆದರೆ ಈ ಪ್ರಕರಣದಲ್ಲಿ ಅದರ ಉಲ್ಲಂಘನೆಯಾಗಿರುವುದನ್ನು ಗಣನೆಗೇ ತೆಗೆದುಕೊಳ್ಳದಿರುವುದು ಮತ್ತು ಆ ಉಲ್ಲಂಘನೆಯನ್ನು ಸಮರ್ಥಿಸುವಂತೆ ಮಾತನಾಡಿರುವುದು.

ವಿಚಾರಣೆ ನಡೆಯಬೇಕಾದರೆ, ಮಸೀದಿ ಸಮಿತಿ ಪರ ವಕೀಲರು, ಸಮೀಕ್ಷೆಗೆ ಆದೇಶಿಸಿದ್ದು ಕಾಯ್ದೆಯ ಕಲಂ 3ರ ಉಲ್ಲಂಘನೆ ಎಂದಾಗ, “ದೇಶದಲ್ಲಿ ಅನೇಕ ಧಾರ್ಮಿಕ ಸ್ಥಳಗಳಲ್ಲಿ ಎರಡು ಧರ್ಮಗಳು ಗುರುತು ಇರುತ್ತವೆ, ಹಾಗಾಗಿ ಅದು ಯಾವ ಧರ್ಮಕ್ಕೆ ಸೇರಿದೆ ಎಂದು ಪರಿಶೀಲಿಸುವುದು ಕಾಯ್ದೆಯ ಉಲ್ಲಂಘನೆಯಲ್ಲ” ಎಂದು ಸಮರ್ಥಿಸಿಕೊಳ್ಳುತ್ತಾರೆ!

ಇದು ಅಪಾಯಕಾರಿ ಸಂಗತಿ. ಏಕೆಂದರೆ ಈಗ ಯಾವುದೋ ಒಂದು ಮಸೀದಿಯಲ್ಲಿ ಹಿಂದೂ ವಿಗ್ರಹಗಳು ಇವೆಯೆಂದು ಅನೇಕ ಜನ ನ್ಯಾಯಾಲಯಕ್ಕೆ ಮೊರೆ ಹೋಗಬಹುದು. ಹಾಗಾಗಿ, 1947ರ ಸಮಯದಲ್ಲಿ ಯಾವುದಾದರು ಸ್ಥಳಗಳು ಮಸೀದಿಯಾಗಿದ್ದರೆ ಅದು ಮಸೀದಿಯಾಗಿ ಉಳಿಯಬೇಕು, ದೇವಾಲಯವಾಗಿದ್ದುದು ದೇವಾಲಯವಾಗಿ ಉಳಿಯಬೇಕು, ಆಗಲೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಹಾಗು ಸಮಾಜ ಒಗ್ಗಟ್ಟಾಗಿರುತ್ತದೆ ಎಂಬ ಉದ್ದೇಶವನ್ನು ಎತ್ತಿಹಿಡಿಯುವ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ಅಪಾಯದಲ್ಲಿದೆ.

ಹೀಗೆ ನ್ಯಾಯಾಲಯಗಳೇ ಹಿಂದುತ್ವವಾದಿ ಸಂಘಟನೆಗಳ ಕೋಮುವಾದಿ ದಾಳಿಗಳಿಗೆ ನೆರವಾಗಿ ನಿಂತಿವೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅದು ದೇವಾಲಯವಾಗಿತ್ತೇ ಎಂಬ ವಿಚಾರಣೆಗಿಂತಲೂ, ಇಲ್ಲಿ ನ್ಯಾಯಾಲಯಗಳು ಸಂವಿಧಾನ ಬದ್ಧವಾಗಿವೆಯೇ ಎಂಬ ವಿಚಾರಣೆ ನಡೆಯುತ್ತಿದೆ.

ವಿನಯ್ ಕೂರಗಾಯಲ ಶ್ರೀನಿವಾಸ

ವಿನಯ್ ಕೂರಗಾಯಲ ಶ್ರೀನಿವಾಸ
ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು. ಆಲ್ಟರ್‍ನೇಟಿವ್ ಲಾ ಫೋರಂನಲ್ಲಿ ತೊಡಗಿಸಿಕೊಂಡಿರುವ ವಿನಯ್ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವುದಲ್ಲದೆ, ಸಂವಿಧಾನದ ಪ್ರಚಾರಕ್ಕಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others



ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ರಮ ಮಸೀದಿಗಳ ಬಿಟ್ಟು ಎಲ್ಲಾ ನಗರ ನಕ್ಸಲ್ ಕಮ್ಯೂನಿಸ್ಟ್ ರ ಮನೆಗಳನ್ನು ಕೋರ್ಟ್ ಮುಟ್ಟುಗೋಲು ಹಾಕಿದರೆ ನ್ಯಾಯ ಸಮ್ಮತ ಆಗಬಹುದು ಅನಿಸುತ್ತೆ ಸಮಾಜದಲ್ಲಿ ಏಕೆಂದರೆ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಇವರಿಂದಲೇ ನಡಿತಿರುವ ಕಾರಣ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...